ಜೂನ್ 12ರಂದು ಹಸ್ತಾಂತರ ಪ್ರಸ್ತಾವ ವಿರೋಧಿಸಿ ಪಾರ್ಲಿಮೆಂಟ್ನ ಹೊರಗೆ ನಡೆದಬೃಹತ್ ಪ್ರತಿಭಟನೆಯಲ್ಲಿ ಭಾರೀ ಸಂಖ್ಯೆಯಲ್ಲಿ ಯುವಜನರು ಭಾಗವಹಿಸಿದ್ದು, ಈ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ರಬ್ಬರ್ ಬುಲೆಟ್ಗಳನ್ನು ಬಳಸಿದ್ದರು. ತಮ್ಮ ಕ್ರಮವನ್ನು ಪೊಲೀಸರು ಸಮರ್ಥಿಸಿಕೊಂಡಿದ್ದರೂ ವಿರೋಧಿಗಳು ಪೊಲೀಸರು ಬಲಪ್ರಯೋಗ ಮಾಡುವುದು ಸರಿಯಲ್ಲ ಎಂದು ಟೀಕಿಸಿ, ಈ ಪ್ರಕರಣದ ಬಗ್ಗೆ ತನಿಖೆಗೆ ಆಗ್ರಹಿಸಿದ್ದರು.