<p><strong>ಹಾಂಗ್ಕಾಂಗ್:</strong> ಹಾಂಗ್ಕಾಂಗ್ ಪೊಲೀಸರು ಅಶ್ರುವಾಯು ಮತ್ತು ರಬ್ಬರ್ ಬುಲೆಟ್ಗಳ ಬಳಕೆ ಮಾಡುವುದರ ವಿರುದ್ಧ ಟೀಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರ ನಡೆಯನ್ನು ಬೆಂಬಲಿಸಿ ಭಾನುವಾರ ಹಾಂಗ್ಕಾಂಗ್ ಪಾರ್ಲಿಮೆಂಟ್ನ ಹೊರಭಾಗ ಸಾವಿರಾರು ಜನರು ರ್ಯಾಲಿ ನಡೆಸಿದರು.</p>.<p>ನೀಲಿ ಮತ್ತು ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸಿದ್ದ ಅನೇಕ ಮಂದಿ ರ್ಯಾಲಿಯಲ್ಲಿ ಭಾಗವಹಿಸಿ ಪೊಲೀಸರಿಗೆ ಬೆಂಬಲ ಸೂಚಿಸಿದರು. ಹಾಂಗ್ಕಾಂಗ್ ಅನ್ನು ಚೀನಾಕ್ಕೆ ಹಸ್ತಾಂತರಿಸುವ ಪ್ರಸ್ತಾವನೆಯನ್ನು ವಿರೋಧಿಸಿ ಜೂನ್ ಆರಂಭದಲ್ಲಿ ಹಾಂಗ್ಕಾಂಗ್ನಲ್ಲಿ ಎರಡು ಬೃಹತ್ ಪ್ರತಿಭಟನಾ ರ್ಯಾಲಿಗಳು ನಡೆದಿದ್ದವು. ಸದ್ಯಕ್ಕೆ ಈ ಪ್ರಸ್ತಾವನೆ ಕುರಿತ ನಿರ್ಧಾರವನ್ನು ಮುಂದೂ ಡಲಾಗಿದೆ. ಈ ಕುರಿತು ಅನಿರೀಕ್ಷಿತ ಘರ್ಷಣೆಗಳೂ ನಡೆದಿವೆ.</p>.<p>ಜೂನ್ 12ರಂದು ಹಸ್ತಾಂತರ ಪ್ರಸ್ತಾವ ವಿರೋಧಿಸಿ ಪಾರ್ಲಿಮೆಂಟ್ನ ಹೊರಗೆ ನಡೆದಬೃಹತ್ ಪ್ರತಿಭಟನೆಯಲ್ಲಿ ಭಾರೀ ಸಂಖ್ಯೆಯಲ್ಲಿ ಯುವಜನರು ಭಾಗವಹಿಸಿದ್ದು, ಈ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ರಬ್ಬರ್ ಬುಲೆಟ್ಗಳನ್ನು ಬಳಸಿದ್ದರು. ತಮ್ಮ ಕ್ರಮವನ್ನು ಪೊಲೀಸರು ಸಮರ್ಥಿಸಿಕೊಂಡಿದ್ದರೂ ವಿರೋಧಿಗಳು ಪೊಲೀಸರು ಬಲಪ್ರಯೋಗ ಮಾಡುವುದು ಸರಿಯಲ್ಲ ಎಂದು ಟೀಕಿಸಿ, ಈ ಪ್ರಕರಣದ ಬಗ್ಗೆ ತನಿಖೆಗೆ ಆಗ್ರಹಿಸಿದ್ದರು.</p>.<p>ಪೊಲೀಸರ ಕ್ರಮದ ಬಗ್ಗೆ ಆಕ್ರೋಶಗೊಂಡ ಜನರು ಕಳೆದ ಎರಡು ವಾರಗಳಲ್ಲಿ ಎರಡು ಬಾರಿ ಪೊಲೀಸ್ ಮುಖ್ಯ ಕಚೇರಿಗೆ ಮುತ್ತಿಗೆ ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಂಗ್ಕಾಂಗ್:</strong> ಹಾಂಗ್ಕಾಂಗ್ ಪೊಲೀಸರು ಅಶ್ರುವಾಯು ಮತ್ತು ರಬ್ಬರ್ ಬುಲೆಟ್ಗಳ ಬಳಕೆ ಮಾಡುವುದರ ವಿರುದ್ಧ ಟೀಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರ ನಡೆಯನ್ನು ಬೆಂಬಲಿಸಿ ಭಾನುವಾರ ಹಾಂಗ್ಕಾಂಗ್ ಪಾರ್ಲಿಮೆಂಟ್ನ ಹೊರಭಾಗ ಸಾವಿರಾರು ಜನರು ರ್ಯಾಲಿ ನಡೆಸಿದರು.</p>.<p>ನೀಲಿ ಮತ್ತು ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸಿದ್ದ ಅನೇಕ ಮಂದಿ ರ್ಯಾಲಿಯಲ್ಲಿ ಭಾಗವಹಿಸಿ ಪೊಲೀಸರಿಗೆ ಬೆಂಬಲ ಸೂಚಿಸಿದರು. ಹಾಂಗ್ಕಾಂಗ್ ಅನ್ನು ಚೀನಾಕ್ಕೆ ಹಸ್ತಾಂತರಿಸುವ ಪ್ರಸ್ತಾವನೆಯನ್ನು ವಿರೋಧಿಸಿ ಜೂನ್ ಆರಂಭದಲ್ಲಿ ಹಾಂಗ್ಕಾಂಗ್ನಲ್ಲಿ ಎರಡು ಬೃಹತ್ ಪ್ರತಿಭಟನಾ ರ್ಯಾಲಿಗಳು ನಡೆದಿದ್ದವು. ಸದ್ಯಕ್ಕೆ ಈ ಪ್ರಸ್ತಾವನೆ ಕುರಿತ ನಿರ್ಧಾರವನ್ನು ಮುಂದೂ ಡಲಾಗಿದೆ. ಈ ಕುರಿತು ಅನಿರೀಕ್ಷಿತ ಘರ್ಷಣೆಗಳೂ ನಡೆದಿವೆ.</p>.<p>ಜೂನ್ 12ರಂದು ಹಸ್ತಾಂತರ ಪ್ರಸ್ತಾವ ವಿರೋಧಿಸಿ ಪಾರ್ಲಿಮೆಂಟ್ನ ಹೊರಗೆ ನಡೆದಬೃಹತ್ ಪ್ರತಿಭಟನೆಯಲ್ಲಿ ಭಾರೀ ಸಂಖ್ಯೆಯಲ್ಲಿ ಯುವಜನರು ಭಾಗವಹಿಸಿದ್ದು, ಈ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ರಬ್ಬರ್ ಬುಲೆಟ್ಗಳನ್ನು ಬಳಸಿದ್ದರು. ತಮ್ಮ ಕ್ರಮವನ್ನು ಪೊಲೀಸರು ಸಮರ್ಥಿಸಿಕೊಂಡಿದ್ದರೂ ವಿರೋಧಿಗಳು ಪೊಲೀಸರು ಬಲಪ್ರಯೋಗ ಮಾಡುವುದು ಸರಿಯಲ್ಲ ಎಂದು ಟೀಕಿಸಿ, ಈ ಪ್ರಕರಣದ ಬಗ್ಗೆ ತನಿಖೆಗೆ ಆಗ್ರಹಿಸಿದ್ದರು.</p>.<p>ಪೊಲೀಸರ ಕ್ರಮದ ಬಗ್ಗೆ ಆಕ್ರೋಶಗೊಂಡ ಜನರು ಕಳೆದ ಎರಡು ವಾರಗಳಲ್ಲಿ ಎರಡು ಬಾರಿ ಪೊಲೀಸ್ ಮುಖ್ಯ ಕಚೇರಿಗೆ ಮುತ್ತಿಗೆ ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>