‘ಭಾರತ– ನೇಪಾಳ ಸಂಬಂಧಗಳು ಸಾಮಾಜಿಕ, ಭೌಗೋಳಿಕ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ವಿಚಾರಗಳಿಗಷ್ಟೇ ಸೀಮಿತವಾಗಿ ಉಳಿದಿಲ್ಲ. ನಾವು ಆಧ್ಯಾತ್ಮಿಕ ಬಾಂಧವ್ಯವನ್ನೂ ಹೊಂದಿದ್ದೇವೆ ಎಂಬುದನ್ನು ಮರೆಯಲು ಸಾಧ್ಯವಿಲ್ಲ. ಯಾರು ಎಷ್ಟೇ ಬೇಲಿಗಳನ್ನು ಹಾಕಿದರೂ ನಮ್ಮ ಬಾಂಧವ್ಯವನ್ನು ಮುರಿಯಲಾಗದು’ ಎಂದು ಚೀನಾದ ಹೆಸರು ಉಲ್ಲೇಖಿಸದೆ ರಾಜನಾಥ್ ಸಿಂಗ್ ಹೇಳಿದ್ದಾರೆ.