ದಕ್ಷಿಣ ಏಷ್ಯಾ ಸ್ಪೀಕರ್ಸ್ ಸಮಿತಿ ವತಿಯಿಂದಮಾಲ್ಡೀವ್ಸ್ನಲ್ಲಿ ಏರ್ಪಡಿಸಿರುವ'ಸುಸ್ಥಿರ ಅಭಿವೃದ್ಧಿ ಗುರಿಗಳು' (ಎಸ್ಡಿಜಿ)ಎಂಬ ವಿಷಯದ ಕುರಿತ ಕಾರ್ಯಕ್ರಮದಲ್ಲಿಈ ಪ್ರಸಂಗ ನಡೆದಿದೆ. ಆ ಸಮಯದಲ್ಲಿ ಪಾಕಿಸ್ತಾನ ಸಂಸತ್ತಿನ ಉಪ ಸಭಾಪತಿ ಖಾಸಿಂ ಸುರಿ ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದರು. ಇದರಿಂದ ಮಧ್ಯಪ್ರವೇಶಿಸಿದ ಭಾರತದರಾಜ್ಯಸಭೆ ಉಪ ಸಭಾಪತಿ ಹರಿವಂಶಸಿಂಗ್, ಕಾಶ್ಮೀರ ಭಾರತದ ಆಂತರಿಕ ವಿಷಯ, ಅದನ್ನು ಇಲ್ಲಿ ಪ್ರಸ್ತಾಪಿಸುವುದು ಸರಿಯಾದ ಕ್ರಮವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.