ರಸ್ತೆ ತುಂಬಾ ಕುಣಿಗಳು ಬಿದ್ದಿವೆ. ಆದರೆ, ಗುತ್ತಿಗೆದಾರರಾಗಲೀ ಅಥವಾ ಅಧಿಕಾರಿಗಳಾಗಲಿ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ರಸ್ತೆಯಲ್ಲಿ ಎದ್ದಿರುವ ಜಲ್ಲಿಕಲ್ಲುಗಳು ಮತ್ತು ಕುಣಿಗಳಿಂದ ದ್ವಿಚಕ್ರ ವಾಹನ ಸವಾರರು ಹಲವು ಬಾರಿ ಆಯ ತಪ್ಪಿ ಬಿದ್ದಿರುವ ಉದಾಹರಣೆಗಳು ಇವೆ. ಪ್ರತಿನಿತ್ಯ ಓಡಾಡಲು ತುಂಬಾ ಸಮಸ್ಯೆಯಾಗುತ್ತಿದೆ ಎಂದು ವಾಹನ ಸವಾರ ರಾಮಚಂದ್ರ ಅವರು ’ಪ್ರಜಾವಾಣಿ’ಗೆ ಸಮಸ್ಯೆ ವಿವರಿಸಿದರು.