ಬೆಂಗಳೂರು: ‘ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕರ್ನಾಟಕ ಸರ್ಕಾರದಿಂದ ಈವರೆಗೂ ಯಾವುದೇ ಪ್ರಸ್ತಾವ ಬಂದಿಲ್ಲ. ಆದರೆ, ಈ ಸಮುದಾಯದವರನ್ನು ಧಾರ್ಮಿಕ ಅಲ್ಪಸಂಖ್ಯಾತರೆಂದು ಪರಿಗಣಿಸುವಂತೆ ಸಲ್ಲಿಸಿರುವ ಪ್ರಸ್ತಾವ ಮಾರ್ಚ್ 26ರಂದು ತಲುಪಿದೆ’ ಎಂದು ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ತಿಳಿಸಿದ್ದಾರೆ.