ಜಕಾರ್ತಾ/ಪಲು:ಇಂಡೊನೇಷ್ಯಾದ ಸುಲಾವೆಸಿ ದ್ವೀಪದಲ್ಲಿ ಸಂಭವಿಸಿದ ಭೂಕಂಪ ಮತ್ತು ಸುನಾಮಿಯಿಂದ ಸಾವಿಗೀಡಾದವರ ಸಂಖ್ಯೆ ಮಂಗಳವಾರ 1234ಕ್ಕೇರಿದೆ.
ಕಳೆದ ನಾಲ್ಕು ದಿನಗಳಿಂದ ಆಹಾರ, ನೀರು ಇಲ್ಲದೆ ಜನರು ಪರಿತಪಿಸುತ್ತಿದ್ದರೆ, ದುಷ್ಕರ್ಮಿಗಳು ಅಂಗಡಿಗಳ ದರೋಡೆಯಲ್ಲಿ ತೊಡಗಿದ್ದಾರೆ.ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆಸಲಾಗಿದೆ.