ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಂಶುಪಾಲರನ್ನು ನೇಮಿಸಿ

Last Updated 7 ಜೂನ್ 2018, 19:30 IST
ಅಕ್ಷರ ಗಾತ್ರ

ರಾಜ್ಯದ ಹೆಚ್ಚಿನ ಸರ್ಕಾರಿ ಪದವಿ ಕಾಲೇಜುಗಳಿಗೆ ಅನೇಕ ವರ್ಷಗಳಿಂದ ಕಾಯಂ ಪ್ರಾಂಶುಪಾಲರಿಲ್ಲ. 2007ರಲ್ಲಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆರಂಭಿಸಿದ 150ಕ್ಕೂ ಅಧಿಕ ಪದವಿ ಕಾಲೇಜುಗಳು ಕೂಡ ಪ್ರಭಾರ ಪ್ರಾಂಶುಪಾಲರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಕಾಲೇಜು ಶಿಕ್ಷಣ ಇಲಾಖೆಯು 2017ರಲ್ಲಿ ಹಿರಿತನದ ಆಧಾರದ ಮೇಲೆ ಪ್ರಾಂಶುಪಾಲರನ್ನು ನೇಮಕ ಮಾಡಲು ಸಂದರ್ಶನವನ್ನು ನಿಗದಿ ಮಾಡಿತ್ತು. ಆದರೆ ಆನಂತರ ಯಾವುದೇ ಕಾರಣ ನೀಡದೆ ಸಂದರ್ಶನವನ್ನು ರದ್ದುಪಡಿಸಿತ್ತು. ಹೊಸ ಸರ್ಕಾರವಾದರೂ ಇತ್ತ ಗಮನ ಹರಿಸಿ, ಕಾಲೇಜುಗಳಿಗೆ ಯುಜಿಸಿ ನಿಯಮಾನುಸಾರ ಕಾಯಂ ಪ್ರಾಂಶುಪಾಲರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು.

ವಸಂತರಾಜು, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT