ಇಂಧನ, ಅರಣ್ಯ, ಸಮಾಜ ಕಲ್ಯಾಣ, ಪಂಚಾಯತ್ ರಾಜ್, ಶಿಕ್ಷಣ... ಹೀಗೆ ವಿವಿಧ ಇಲಾಖೆಗಳಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಸಮಯದಿಂದ ಗುತ್ತಿಗೆ ಆಧಾರದಲ್ಲಿ ನೌಕರರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಉದ್ಯೋಗ ಭದ್ರತೆ ಇಲ್ಲ. ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳಲಾಗುತ್ತಿದೆ. ತಮ್ಮ ಬೇಡಿಕೆ ಈಡೇರಿಕೆಗಾಗಿ ಈ ನೌಕರರು ಪ್ರತಿಭಟನೆ ಮಾಡಿದ್ದರೂ ಅದಕ್ಕೆ ಯಾವ ಸಚಿವರೂ ಸೊಪ್ಪು ಹಾಕಲಿಲ್ಲ.