ದೇಶದಲ್ಲಿನ ನಿರುದ್ಯೋಗ, ಭ್ರಷ್ಟಾಚಾರ ಮತ್ತು ಕಳಪೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ವಿರುದ್ಧ ಸಾವಿರಾರು ಸಂಖ್ಯೆಯಲ್ಲಿ ಇಲ್ಲಿನ ಯುವಕರು ದೇಶದ ನಾನಾ ಭಾಗಗಳಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದ್ದು, ನೂರಾರು ಪ್ರತಿಭಟನಕಾರರು ಇಲ್ಲಿಯವರೆಗೆ ಮೃತಪಟ್ಟಿದ್ದಾರೆ.