ಈ ಸಂಬಂಧ ಮಾಧ್ಯಮದ ಜೊತೆ ಮಾತನಾಡಿದ ಇಸ್ಲಾಮಾಬಾದ್ನಲ್ಲಿರುವ ಭಾರತದ ರಾಯಭಾರಿ ಅಜಯ್ ಬಿಸಾರಿಯಾ, ಇದು ರಾಜತಾಂತ್ರಿಕ ನಡಾವಳಿಗಳ ಉಲ್ಲಂಘನೆ ಅಷ್ಟೇ ಅಲ್ಲ, ಅನಾಗರಿಕ ವರ್ತನೆಯಾಗಿದೆ. ಈ ಘಟನೆಯಿಂದಾಗಿ ನಮ್ಮ ದ್ವಿಪಕ್ಷೀಯ ಸಂಬಂಧಕ್ಕೆ ಪ್ರತಿರೋಧ ವ್ಯಕ್ತಪಡಿಸಿದಂತಾಗಿದೆ ಎಂದಿದ್ದಾರೆ. ಅಲ್ಲದೆ, ಆಹ್ವಾನಿತ ಅತಿಥಿಗಳಲ್ಲಿ ಕ್ಷಮೆಯಾಚಿಸಿ, ಅಹಿತಕರ ಘಟನೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.