ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ಲಾಮಾಬಾದ್- ಭಾರತೀಯ ಇಫ್ತಾರ್ ಕೂಟಕ್ಕೆ ಅಡ್ಡಿ

Last Updated 2 ಜೂನ್ 2019, 5:36 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಭಾರತೀಯ ರಾಯಭಾರ ಕಚೇರಿ ವತಿಯಿಂದ ಇಲ್ಲಿನ ಖಾಸಗಿ ಹೋಟೆಲ್‌‌ನಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟಕ್ಕೆ ಮುತ್ತಿಗೆ ಹಾಕಿದ ಪಾಕಿಸ್ತಾನದ ಕೆಲ ಸಂಘಟನೆಗಳ ಕಾರ್ಯಕರ್ತರುಕಾರ್ಯಕ್ರಮದಲ್ಲಿ ಸೇರಿದ್ದ ಅತಿಥಿಗಳು ಹಾಗೂ ಅಧಿಕಾರಿಗಳಿಗೆ ಪ್ರಾಣಬೆದರಿಕೆ ಹಾಕಿ ಹೊರಗೆ ಕಳುಹಿಸಿದ ಘಟನೆ ನಡೆದಿದೆ.

ಶನಿವಾರ ರಾತ್ರಿ ಇಲ್ಲಿನ ಹೋಟೆಲ್ ಸೆರೆನಾದಲ್ಲಿ ಈ ಘಟನೆ ನಡೆದಿದೆ. ಭಾರತದ ರಾಯಭಾರಿ ಅಜಯ್ ಬಿಸರಿಯಾ ಅವರು ಇಫ್ತಾರ್ ಕೂಟವನ್ನು ಏರ್ಪಡಿಸಿದ್ದರು. ಅಲ್ಲದೆ, ಪಾಕಿಸ್ತಾನದ ಪ್ರಜೆಗಳೂ, ಭಾರತೀಯ ಮೂಲದವರನ್ನೂ ಅತಿಥಿಗಳನ್ನಾಗಿ ಆಹ್ವಾನಿಸಲಾಗಿತ್ತು. ಈ ಸಮಯದಲ್ಲಿ ಬಂದ ಕೆಲ ಕಾರ್ಯಕರ್ತರುಅತಿಥಿಗಳಿಗೆ ಬೆದರಿಕೆ ಹಾಕಿ, ಇಲ್ಲಿಂದ ಜಾಗ ಖಾಲಿ ಮಾಡುವಂತೆ ಹೇಳಿ ಬಲವಂತವಾಗಿ ಹೋಟೆಲ್‌‌ನಿಂದ ಕಳುಹಿಸಿದ್ದಾರೆ.

ಈ ಸಂಬಂಧ ಮಾಧ್ಯಮದ ಜೊತೆ ಮಾತನಾಡಿದ ಇಸ್ಲಾಮಾಬಾದ್‌‌ನಲ್ಲಿರುವ ಭಾರತದ ರಾಯಭಾರಿ ಅಜಯ್ ಬಿಸಾರಿಯಾ, ಇದು ರಾಜತಾಂತ್ರಿಕ ನಡಾವಳಿಗಳ ಉಲ್ಲಂಘನೆ ಅಷ್ಟೇ ಅಲ್ಲ, ಅನಾಗರಿಕ ವರ್ತನೆಯಾಗಿದೆ. ಈ ಘಟನೆಯಿಂದಾಗಿ ನಮ್ಮ ದ್ವಿಪಕ್ಷೀಯ ಸಂಬಂಧಕ್ಕೆ ಪ್ರತಿರೋಧ ವ್ಯಕ್ತಪಡಿಸಿದಂತಾಗಿದೆ ಎಂದಿದ್ದಾರೆ. ಅಲ್ಲದೆ, ಆಹ್ವಾನಿತ ಅತಿಥಿಗಳಲ್ಲಿ ಕ್ಷಮೆಯಾಚಿಸಿ, ಅಹಿತಕರ ಘಟನೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT