ಮಾರಿಷಸ್ ಪ್ರಧಾನಿ ಪ್ರವಿಂದ್ ಜಗನ್ನಾಥ್ಚಂದ್ರಯಾನ-2 ಪ್ರಯತ್ನದ ಕುರಿತು ಹೇಳಿಕೆ ನೀಡಿದ್ದು, ಈ ಬಾರಿ ಚಂದ್ರನ ಮೇಲೆ ಲ್ಯಾಂಡ್ ಆಗಲು ಯಶಸ್ವಿಯಾಗಲಿಲ್ಲ. ಆದರೆ, ಈ ವಿಶೇಷ ಕಾರ್ಯಕ್ರಮದ ಮೂಲಕ ಭಾರತ ತಾಂತ್ರಿಕತೆಯಲ್ಲಿ ಮುಂದಿದೆ ಎಂಬುದನ್ನು ವಿಶ್ವಕ್ಕೆ ತಿಳಿಯುವಂತೆ ಮಾಡಿದೆ ಎಂದು ಪ್ರಶಂಸಿದ್ದಾರೆ.ಅಲ್ಲದೆ, ಇಸ್ರೊಜೊತೆ ಭವಿಷ್ಯದಲ್ಲಿ ಕೈಜೋಡಿಸಲು ಸಿದ್ಧವಿದೆ.ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಯತ್ನಕ್ಕಾಗಿಭಾರತ ಸರ್ಕಾರ ಹಾಗೂ ಇಸ್ರೊವಿಜ್ಞಾನಿಗಳ ತಂಡವನ್ನುಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.