ಕಾಶ್ಮೀರದ ವಿಶೇಷಾಧಿಕಾರ ರದ್ದತಿ ಬಳಿಕ ಇಮ್ರಾನ್ ಅವರು ಭಾರತದ ವಿರುದ್ಧ ಹರಿಹಾಯುತ್ತಲೇ ಇದ್ದಾರೆ. ಭಾರತವು ಮತಾಂಧ ಮತ್ತು ಸರ್ವಾಧಿಕಾರಿಯಾಗಿದೆ. ಇದು ಪಾಕಿಸ್ತಾನಕ್ಕೆ ಮಾತ್ರವಲ್ಲದೆ, ಭಾರತದಲ್ಲಿರುವ ಅಲ್ಪಸಂಖ್ಯಾತರಿಗೂ ಅಪಾಯಕಾರಿ ಎಂದು ಭಾನುವಾರ ಹೇಳಿದ್ದರು. ಭಾರತದಲ್ಲಿರುವ ಅಣ್ವಸ್ತ್ರಗಳ ಸುರಕ್ಷತೆ ಬಗ್ಗೆ ಜಗತ್ತು ಗಮನ ಹರಿಸಬೇಕು. ಯಾಕೆಂದರೆ ಇದು ಇಡೀ ಜಗತ್ತಿನ ಮೇಲೆ ಪರಿಣಾಮ ಬೀರುತ್ತದೆ ಎಂದೂ ಹೇಳಿದ್ದರು.