<p><strong>ನವದೆಹಲಿ: </strong>ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರು ಸೌದಿ<br />ಯುವರಾಜನನ್ನು ಬುಧವಾರ ಭೇಟಿಯಾದರು. ಜಮ್ಮು ಕಾಶ್ಮೀರದ ವಿಶೇಷಾಧಿಕಾರ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿಲುವು ಹಾಗೂ ಕಾಶ್ಮೀರದ ಸ್ಥಿತಿ ಬಗ್ಗೆ ಅವರು ಮಾಹಿತಿ ನೀಡಿದರು.</p>.<p>ಕಾಶ್ಮೀರದ ವಿಚಾರದಲ್ಲಿ ದೀರ್ಘಕಾಲದಿಂದ ಭಾರತ ಅನುಸರಿಸುತ್ತಿರುವ ನೀತಿಯ ಬಗ್ಗೆ ಅರಿವಿದೆ ಎಂದು ತಿಳಿಸಿದ ಸೌದಿ ಯುವ<br />ರಾಜ ಸಲ್ಮಾನ್, ಪಾಕಿಸ್ತಾನ ಹಾಗೂ ಭಾರತದ ನಡುವಿನ ಬಿಕ್ಕಟ್ಟು ಶಮನಗೊಳ್ಳುವ ಅಗತ್ಯವಿದೆ ಎಂದು ಒತ್ತು ಹೇಳಿದರು.</p>.<p>ಪಾಕಿಸ್ತಾನದ ಮಿತ್ರಕೂಟದ ಭಾಗವಾಗಿರುವ ಸೌದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದ ಕಡೆಗಿದೆ. ಉಗ್ರವಾದದ ಸವಾಲು ಎದುರಿಸಲು ಸಹಕಾರದವಾಗ್ದಾನ ನೀಡಿದೆ.</p>.<p>ಸೌದಿಯ ತೈಲ ಘಟಕಗಳ ಮೇಲೆ ಇತ್ತೀಚೆಗೆ ನಡೆದ ಡ್ರೋನ್ ದಾಳಿ ಕುರಿತೂ ಚರ್ಚೆ ನಡೆಯಿತು. ಸೌದಿಯು ಭಾರತಕ್ಕೆ ತೈಲ ಪೂರೈಸುವ ಪ್ರಮುಖ ರಾಷ್ಟ್ರವಾಗಿದೆ. ತೈಲ ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಸೌದಿ ಇದೇ ವೇಳೆ ಭರವಸೆ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರು ಸೌದಿ<br />ಯುವರಾಜನನ್ನು ಬುಧವಾರ ಭೇಟಿಯಾದರು. ಜಮ್ಮು ಕಾಶ್ಮೀರದ ವಿಶೇಷಾಧಿಕಾರ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿಲುವು ಹಾಗೂ ಕಾಶ್ಮೀರದ ಸ್ಥಿತಿ ಬಗ್ಗೆ ಅವರು ಮಾಹಿತಿ ನೀಡಿದರು.</p>.<p>ಕಾಶ್ಮೀರದ ವಿಚಾರದಲ್ಲಿ ದೀರ್ಘಕಾಲದಿಂದ ಭಾರತ ಅನುಸರಿಸುತ್ತಿರುವ ನೀತಿಯ ಬಗ್ಗೆ ಅರಿವಿದೆ ಎಂದು ತಿಳಿಸಿದ ಸೌದಿ ಯುವ<br />ರಾಜ ಸಲ್ಮಾನ್, ಪಾಕಿಸ್ತಾನ ಹಾಗೂ ಭಾರತದ ನಡುವಿನ ಬಿಕ್ಕಟ್ಟು ಶಮನಗೊಳ್ಳುವ ಅಗತ್ಯವಿದೆ ಎಂದು ಒತ್ತು ಹೇಳಿದರು.</p>.<p>ಪಾಕಿಸ್ತಾನದ ಮಿತ್ರಕೂಟದ ಭಾಗವಾಗಿರುವ ಸೌದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದ ಕಡೆಗಿದೆ. ಉಗ್ರವಾದದ ಸವಾಲು ಎದುರಿಸಲು ಸಹಕಾರದವಾಗ್ದಾನ ನೀಡಿದೆ.</p>.<p>ಸೌದಿಯ ತೈಲ ಘಟಕಗಳ ಮೇಲೆ ಇತ್ತೀಚೆಗೆ ನಡೆದ ಡ್ರೋನ್ ದಾಳಿ ಕುರಿತೂ ಚರ್ಚೆ ನಡೆಯಿತು. ಸೌದಿಯು ಭಾರತಕ್ಕೆ ತೈಲ ಪೂರೈಸುವ ಪ್ರಮುಖ ರಾಷ್ಟ್ರವಾಗಿದೆ. ತೈಲ ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಸೌದಿ ಇದೇ ವೇಳೆ ಭರವಸೆ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>