ಚಿಕ್ಕಮಗಳೂರು: ಮತದಾನ ಗೋಪ್ಯತೆ ನಿಯಮ ಉಲ್ಲಂಘನೆ ಪ್ರಕರಣದಲ್ಲಿ, ಜಿಲ್ಲೆಯ ನರಸಿಂಹರಾಪುರದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭೋಗೇಶಪ್ಪ ಅವರನ್ನು ಅಮಾನತು ಮಾಡಲಾಗಿದೆ.
ಭೋಗೇಶಪ್ಪ ಅವರು ತಾವು ಚಲಾಯಿಸಿದ ಅಂಚೆ ಮತಪತ್ರದ ಫೋಟೊ ತೆಗೆದು ವ್ಯಾಟ್ಸ್ ಆ್ಯಪ್ನಲ್ಲಿ ಹಾಕಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಭೋಗೇಶಪ್ಪ ಅವರು ಪ್ರಜಾಪ್ರತಿನಿಧಿ ಕಾಯ್ದೆ (1951ರ ಕಲಂ 128) ಮತದಾನ ಗೋಪ್ಯತೆ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಈ ಕುರಿತು ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ವರದಿ ನೀಡಿದ್ದಾರೆ. ಇಲಾಖೆ ವಿಚಾರಣೆ ಕಾಯ್ದಿರಿಸಿ ಅವರನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಆದೇಶದಲ್ಲಿ ತಿಳಿಸಿದ್ದಾರೆ.