ಕಳೆದ ಶುಕ್ರವಾರ ಉಂಟಾಗಿದ್ದ ರಾಜಕೀಯ ವಿದ್ಯಮಾನದಲ್ಲಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಹುದ್ದೆಯಿಂದ ಕೆಳಗಿಳಿಸಿ, ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಷೆ ಅವರನ್ನು ಪ್ರಧಾನಿಯನ್ನಾಗಿ ನೇಮಕ ಮಾಡಲಾಗಿತ್ತು.ಇದರ ನಡುವೆಯೇ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಸಂಸತ್ತನ್ನು ನ. 16ರವರೆಗೆ ಅಮಾನತಿನಲ್ಲಿರಿಸಿ ಆದೇಶ ಹೊರಡಿಸಿದ್ದರು.