‘ಡಾನ್‘ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ‘ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಶರೀಫ್ ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ಶಕ್ತಿಮೀರಿ ಪ್ರಯತ್ನಿಸಿದರು. ಆದರೆ, ಪಾಕಿಸ್ತಾನವನ್ನು ದೂರವಿಡುವ ಉದ್ದೇಶ ನರೇಂದ್ರ ಮೋದಿ ಸರ್ಕಾರದ್ದಾಗಿರುವುದರಿಂದ ಬಿಕ್ಕಟ್ಟು ಬಗೆಹರಿದಿಲ್ಲ’ ಎಂದು ಹೇಳಿದ್ದಾರೆ.