ಅಲ್ಲಿ ಪರೀಕ್ಷೆಗೆ ಅಸಹಕಾರ ವ್ಯಕ್ತಪಡಿಸಿರುವ ನವೀನ್, ಪೊಲೀಸರು ಬಲವಂತದಿಂದ ಕರೆದುಕೊಂಡು ಬಂದಿರುವುದಾಗಿ ಹೇಳಿದ್ದಾನೆ. ಅದಕ್ಕೆ ಎಫ್ಎಸ್ಎಲ್ ತಜ್ಞರು, ‘ಆತನಿಗೆ ಇಷ್ಟವಿಲ್ಲದೆ ಪರೀಕ್ಷೆಗೆ ಒಳಪಡಿಸುವುದು ಸರಿಯಲ್ಲ. ಒಂದು ವೇಳೆ ಪರೀಕ್ಷೆ ಮಾಡಿದರೂ, ನಿಖರ ಫಲಿತಾಂಶ ಸಿಗುವುದಿಲ್ಲ’ ಎಂದು ಹೇಳಿದ್ದಾರೆ. ಹೀಗಾಗಿ, ಪೊಲೀಸರು ಆರೋಪಿಯನ್ನು ನಗರಕ್ಕೆ ವಾಪಸ್ ಕರೆತಂದಿದ್ದಾರೆ.