ಅಧ್ಯಕ್ಷರಾಗಿದ್ದ ಮುಷರಫ್, 2007ರ ನವೆಂಬರ್ 3ರಂದು ತುರ್ತು ಪರಿಸ್ಥಿತಿ ಘೋಷಿಸಿದ್ದರು. ನಂತರ ಬಂದ ನವಾಜ್ ಷರೀಫ್ ನೇತೃತ್ವದ ಸರ್ಕಾರ, ಮುಷರಫ್ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ 2013ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. 2014ರ ಮಾರ್ಚ್ 31ರಂದು ಅವರ ವಿರುದ್ಧ ದೋಷಾರೋಪ ಹೊರಿಸಲಾಗಿತ್ತು.