<p><strong>ಇಸ್ಲಾಮಾಬಾದ್</strong>: ‘ಭಯೋತ್ಪಾದನೆ ಕುರಿತು ವಿಶ್ವಸಂಸ್ಥೆಯ ಇತ್ತೀಚಿನ ವರದಿಯನ್ನು ಭಾರತ ದುರುದ್ದೇಶಪೂರಕವಾಗಿ ಸಮರ್ಥಿಸಿಕೊಂಡಿದೆ’ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ಸೋಮವಾರ ಹೇಳಿದೆ.</p>.<p>‘ಪಾಕಿಸ್ತಾನವು ಭಯೋತ್ಪಾದನೆಯ ಕೇಂದ್ರ ಬಿಂದು’ ಎಂಬ ವಾಸ್ತವವನ್ನು ಅಂತರರಾಷ್ಟ್ರೀಯ ಸಮುದಾಯದ ಚೆನ್ನಾಗಿ ತಿಳಿದಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಇತ್ತೀಚೆಗೆ ಹೇಳಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿರುವಪಾಕಿಸ್ತಾನದ ವಿದೇಶಾಂಗ ಕಚೇರಿಯು, ‘ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಹೇಳಿಕೆಗಳನ್ನು ಭಾರತ ಸಂಪೂರ್ಣವಾಗಿ ತಿರುಚಿದೆ. ಇದು ಖಂಡನೀಯ. ಭಾರತದ ಈ ಹೇಳಿಕೆಯು ಕಾಶ್ಮೀರದಿಂದ ಅಂತರರಾಷ್ಟ್ರೀಯ ಗಮನವನ್ನು ಬೇರೆಡೆಗೆ ಸೆಳೆಯುವ ಅಭಿಯಾನದ ಮುಂದುವರಿಕೆಯಾಗಿದೆ’ ಎಂದು ಹೇಳಿತ್ತು.</p>.<p>‘ವಿಶ್ವಸಂಸ್ಥೆಯ ವಿಶ್ಲೇಷಣಾತ್ಮಕ ಬೆಂಬಲ ಮತ್ತು ಮೇಲ್ವಿಚಾರಣಾ ತಂಡದ ವರದಿಯನ್ನು ಭಾರತ ವಿರೂಪಗೊಳಿಸಿ, ತಪ್ಪಾಗಿ ನಿರೂಪಿಸಲು ಯತ್ನಿಸುತ್ತಿದೆ. ಇದು ವಿಶ್ವ ಸಮುದಾಯದ ದಾರಿಯನ್ನು ತಪ್ಪಿಸುವುದಿಲ್ಲ ಎಂಬುದು ನಮಗೆ ಖಾತ್ರಿಯಿದೆ’ ಎಂದೂ ಪಾಕಿಸ್ತಾನಹೇಳಿದೆ.</p>.<p>‘ಅಫ್ಘಾನಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ಭಯೋತ್ಪಾದಕರಲ್ಲಿ ಸುಮಾರು 6,500 ಭಯೋತ್ಪಾದಕರು ಪಾಕಿಸ್ತಾನಕ್ಕೆ ಸೇರಿದವರು. ಪಾಕಿಸ್ತಾನದ ಮೂಲದ ಜೈಷ್–ಎ–ಮೊಹಮ್ಮದ್ ಮತ್ತು ಲಷ್ಕರ್–ಎ–ತಯಬಾ ಭಯೋತ್ಪಾದನಾ ಸಂಘಟನೆಗಳು ಅಫ್ಘಾನಿಸ್ತಾನಕ್ಕೆ ಭಯೋತ್ಪಾದಕರನ್ನು ಕಳ್ಳಸಾಗಣೆ ಮಾಡುವ ಕಾರ್ಯದಲ್ಲಿ ನಿರತವಾಗಿವೆ’ ಎಂದು ವಿಶ್ವಸಂಸ್ಥೆಯು ತನ್ನ ವರದಿಯಲ್ಲಿ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ‘ಭಯೋತ್ಪಾದನೆ ಕುರಿತು ವಿಶ್ವಸಂಸ್ಥೆಯ ಇತ್ತೀಚಿನ ವರದಿಯನ್ನು ಭಾರತ ದುರುದ್ದೇಶಪೂರಕವಾಗಿ ಸಮರ್ಥಿಸಿಕೊಂಡಿದೆ’ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ ಸೋಮವಾರ ಹೇಳಿದೆ.</p>.<p>‘ಪಾಕಿಸ್ತಾನವು ಭಯೋತ್ಪಾದನೆಯ ಕೇಂದ್ರ ಬಿಂದು’ ಎಂಬ ವಾಸ್ತವವನ್ನು ಅಂತರರಾಷ್ಟ್ರೀಯ ಸಮುದಾಯದ ಚೆನ್ನಾಗಿ ತಿಳಿದಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಇತ್ತೀಚೆಗೆ ಹೇಳಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿರುವಪಾಕಿಸ್ತಾನದ ವಿದೇಶಾಂಗ ಕಚೇರಿಯು, ‘ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಹೇಳಿಕೆಗಳನ್ನು ಭಾರತ ಸಂಪೂರ್ಣವಾಗಿ ತಿರುಚಿದೆ. ಇದು ಖಂಡನೀಯ. ಭಾರತದ ಈ ಹೇಳಿಕೆಯು ಕಾಶ್ಮೀರದಿಂದ ಅಂತರರಾಷ್ಟ್ರೀಯ ಗಮನವನ್ನು ಬೇರೆಡೆಗೆ ಸೆಳೆಯುವ ಅಭಿಯಾನದ ಮುಂದುವರಿಕೆಯಾಗಿದೆ’ ಎಂದು ಹೇಳಿತ್ತು.</p>.<p>‘ವಿಶ್ವಸಂಸ್ಥೆಯ ವಿಶ್ಲೇಷಣಾತ್ಮಕ ಬೆಂಬಲ ಮತ್ತು ಮೇಲ್ವಿಚಾರಣಾ ತಂಡದ ವರದಿಯನ್ನು ಭಾರತ ವಿರೂಪಗೊಳಿಸಿ, ತಪ್ಪಾಗಿ ನಿರೂಪಿಸಲು ಯತ್ನಿಸುತ್ತಿದೆ. ಇದು ವಿಶ್ವ ಸಮುದಾಯದ ದಾರಿಯನ್ನು ತಪ್ಪಿಸುವುದಿಲ್ಲ ಎಂಬುದು ನಮಗೆ ಖಾತ್ರಿಯಿದೆ’ ಎಂದೂ ಪಾಕಿಸ್ತಾನಹೇಳಿದೆ.</p>.<p>‘ಅಫ್ಘಾನಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ಭಯೋತ್ಪಾದಕರಲ್ಲಿ ಸುಮಾರು 6,500 ಭಯೋತ್ಪಾದಕರು ಪಾಕಿಸ್ತಾನಕ್ಕೆ ಸೇರಿದವರು. ಪಾಕಿಸ್ತಾನದ ಮೂಲದ ಜೈಷ್–ಎ–ಮೊಹಮ್ಮದ್ ಮತ್ತು ಲಷ್ಕರ್–ಎ–ತಯಬಾ ಭಯೋತ್ಪಾದನಾ ಸಂಘಟನೆಗಳು ಅಫ್ಘಾನಿಸ್ತಾನಕ್ಕೆ ಭಯೋತ್ಪಾದಕರನ್ನು ಕಳ್ಳಸಾಗಣೆ ಮಾಡುವ ಕಾರ್ಯದಲ್ಲಿ ನಿರತವಾಗಿವೆ’ ಎಂದು ವಿಶ್ವಸಂಸ್ಥೆಯು ತನ್ನ ವರದಿಯಲ್ಲಿ ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>