ಇಸ್ಲಾಮಾಬಾದ್: ಇಲ್ಲಿರುವ ಭಾರತದ ಹೈಕಮಿಷನ್ನ ಇಬ್ಬರು ಅಧಿಕಾರಿಗಳನ್ನು ಅಪಹರಿಸಿ ಅವರ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂಬಭಾರತದ ಆರೋಪ ಆಧಾರರಹಿತ ಎಂದು ಪಾಕಿಸ್ತಾನ ಬುಧವಾರ ಹೇಳಿದೆ.
ಅಪಘಾತ ನಡೆಸಿ ಪರಾರಿಯಾದ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು ಎಂದು ಪಾಕಿಸ್ತಾನ ಹೇಳಿಕೊಂಡಿದೆ.
ಆದರೆ ಅವರಿಗೆ ರಾಜತಾಂತ್ರಿಕ ರಕ್ಷಣೆ ಇದೆ ಎಂಬ ಮಾಹಿತಿಯನ್ನುಭಾರತ ನೀಡಿ ಈ ಕ್ರಮ ಪ್ರತಿಭಟಿಸಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು.
ಹೈ ಕಮಿಷನ್ನ ಇಬ್ಬರು ಅಧಿಕಾರಿಗಳನ್ನು ಅಪಹರಿಸಿ ದೌರ್ಜನ್ಯ ಎಸಗಿದ ಬಗ್ಗೆ ಭಾರತ ಮಂಗಳವಾರ ಪಾಕಿಸ್ತಾನದ ಹೈಕಮಿಷನ್ ಕಚೇರಿಯ ಹೈದರ್ ಷಾ ಅವರಿಗೆ ಕರೆ ಕಳುಹಿಸಿ ಪ್ರತಿಭಟನೆ ದಾಖಲಿಸಿತ್ತು.