ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆ ಬಳಿ ಭಾರತ ನಡೆಸಿದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಮಹಿಳೆ ಸೇರಿದಂತೆ ನಾಲ್ವರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಸೇನಾಪಡೆಯ ವಕ್ತಾರರು ಆರೋಪಿಸಿದ್ದಾರೆ.
ನಿಕಿಯಲ್ ಮತ್ತು ಬಗ್ಸಾರ್ ಪ್ರದೇಶಗಳ ಜನರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವಕ್ತಾರ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಆಪಾದಿಸಿದ್ದಾರೆ.
ಈ ಪ್ರದೇಶಗಳಲ್ಲಿ ಭಾರತದ ಸೇನಾಪಡೆಯವರು ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಾಕಿಸ್ತಾನದ ಸೇನಾಪಡೆಯೂ ದಾಳಿಗೆ ತಕ್ಕ ಉತ್ತರ ನೀಡಿತು ಎಂದೂ ಅವರು ಹೇಳಿದ್ದಾರೆ.