ಗದಗಿನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಟೆಂಡರ್ ಕರೆಯಲಾಗಿತ್ತು. ಒಂದು ವೇಳೆ ಸರ್ಕಾರ ಬಂದರೂ ಯಾರು ಮೇಲಿನವರಿಗೆ ಅತ್ಯಂತ ಹೆಚ್ಚು ಹಣ ತಲುಪಿಸುತ್ತಾರೆ, ಅವರಿಗೆ ಹುದ್ದೆಗಳನ್ನು ನೀಡಬೇಕು ಎಂಬ ಒಪ್ಪಂದ ಈಗಲೇ ಆಗಿದೆ. ಮತದಾರರೇ, ಬಹಳ ಎಚ್ಚರಿಕೆಯಿಂದಿರಬೇಕು. ಈ ಚುನಾವಣೆಯಲ್ಲಿ ನೀವು ಕಾಂಗ್ರೆಸ್ ಅನ್ನು ಸೋಲಿಸಲಿದ್ದೀರಿ. ನಂತರ ಅದು ಪಿ.ಪಿ.ಪಿ. ಕಾಂಗ್ರೆಸ್ ಆಗಲಿದೆ. ಪಿ.ಪಿ.ಪಿ. ಕಾಂಗ್ರೆಸ್ ಅಂದರೆ ಪಂಜಾಬ್, ಪುದುಚೆರಿ, ಪರಿವಾರ ಪಾರ್ಟಿ ಎಂದು ಲೇವಡಿ ಮಾಡಿದರು.