ರಾಜರಾಜೇಶ್ವರಿ ನಗರ, ಮಲ್ಲೇಶ್ವರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು ಕಳಪೆಯಾಗಿದ್ದವು. ನಕಲಿ ಬಿಲ್ ಸೃಷ್ಟಿಸಿದ್ದ ಆರೋಪಿಗಳು, ₹1,539 ಕೋಟಿ ಮೊತ್ತವನ್ನು ಮಂಜೂರು ಮಾಡಿಸಿಕೊಂಡಿದ್ದರು. ಆ ಬಗ್ಗೆ ತನಿಖೆ ನಡೆಸಿದ್ದ ಅಂದಿನ ಬಿಬಿಎಂಪಿ ಆಯುಕ್ತ ಸಿದ್ದಯ್ಯ ಅವರು ಕಾರ್ಯಪಾಲಕ ಎಂಜಿನಿಯರ್ಗಳಾದ (ನಿವೃತ್ತ) ಬಿ.ಜಿ.ಪ್ರಕಾಶ್ ಕುಮಾರ್, ವೈ.ಎಂ.ಮುನಿರಾಜು, ಸಹಾಯಕ ಎಂಜಿನಿಯರ್ ಎಂ.ಕೆ. ಹರೀಶ್ ಹಾಗೂ ಶಾಸಕ ಮುನಿರತ್ನ ವಿರುದ್ಧ ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಠಾಣೆಗೆ ದೂರು ನೀಡಿದ್ದರು. ಪ್ರಕರಣದಲ್ಲಿ ಆರೋಪಿಗಳು ಜಾಮೀನು ಸಹ ಪಡೆದುಕೊಂಡಿದ್ದರು.