ಗೆದ್ದ ಅಭ್ಯರ್ಥಿಗಳ ಸಂಭ್ರಮ: ಬೆಳಿಗ್ಗೆ 10 ಗಂಟೆಯಾದರೂ ಮತ ಎಣಿಕೆ ಕೇಂದ್ರದ ಕಡೆಗೆ ಸುಳಿಯದ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಲಕ್ಷಣಗಳು ಕಾಣುತ್ತಿದ್ದಂತೆ ಒಬ್ಬೊಬ್ಬರಾಗಿ ಬರತೊಡಗಿದರು. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಸೇರಿ ವಿಜಯದ ನಗು ಬೀರಿದರು. ತೀರ್ಥಹಳ್ಳಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಎಲ್ಲರಿಗಿಂತ ಮೊದಲು ಬಂದು ಸಂಭ್ರಮಾಚರಣೆ ನಡೆಸಿದರು. ಆನಂತರ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶೋಕ ನಾಯ್ಕ, ಕೆ.ಎಸ್.ಈಶ್ವರಪ್ಪ, ಕುಮಾರ ಬಂಗಾರಪ್ಪ, ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಏಕೈಕ ಅಭ್ಯರ್ಥಿ ಭದ್ರಾವತಿಯ ಬಿ.ಕೆ.ಸಂಗಮೇಶ್ವರ ಮತ ಎಣಿಕೆ ಕೇಂದ್ರಕ್ಕೆ ಬಂದರು.