ಶ್ರೀಲಂಕಾದ ಪ್ರಮುಖ ಚರ್ಚ್ಗಳ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಹೂಡಿರುವ ಸಾಧ್ಯತೆ ಇದೆ ಎಂದು ಗುಪ್ತಚರ ಮಾಹಿತಿ ಆಧರಿಸಿ ಪೊಲೀಸ್ ಮುಖ್ಯಸ್ಥ ಪುಜುತ್ ಜಯಸುಂದರ ಅವರು ಏಪ್ರಿಲ್ 11ರಂದು ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ಕಳುಹಿಸಿದ್ದರು. ಈ ಕುರಿತು ದಾಖಲೆಗಳು ಲಭ್ಯವಾಗಿವೆ ಎಂದು ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿತ್ತು.