ಕೊಲಂಬೊ: ರನಿಲ್ ನಿಷ್ಠ, ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಅವರನ್ನು ಅಪಹರಿಸಲು ಸಿರಿಸೇನ ಬೆಂಬಲಿಗರ ಗುಂಪು ಯತ್ನಿಸಿದಾಗ ರಣತುಂಗ ಅಂಗರಕ್ಷಕರು ಹಾರಿಸಿದ ಗುಂಡಿಗೆ ವ್ಯಕ್ತಿಯೊಬ್ಬರು ಭಾನುವಾರಬಲಿಯಾಗಿದ್ದರು. ಈ ಪ್ರಕರಣದಲ್ಲಿ ರಣತುಂಗ ಅವರನ್ನು ಸೋಮವಾರ ಬಂಧಿಸಲಾಗಿದೆ.
ಕೊಲಂಬೊ ಅಪರಾಧ ವಿಭಾಗ ರಣತುಂಗ ಅವರನ್ನು ವಶ ಪಡಿಸಿದ್ದು, ನ್ಯಾಯಾಲಯಕ್ಕೆಹಾಜರು ಪಡಿಸಲಿದ್ದಾರೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.