‘ವರ್ಷಗಳೇ ಕಳೆದರೂ ಈ ಭಾಗದ ಚರಂಡಿಗಳೆಲ್ಲ ಹೂಳು, ಕಸ, ಕಡ್ಡಿ, ಪ್ಲಾಸ್ಟಿಕ್ ವಸ್ತುಗಳಿಂದ ಅಧ್ವಾನಗೊಂಡು ಗಬ್ಬೆದ್ದು ನಾರುತ್ತಿವೆ. ಮಡುಗಟ್ಟಿ ನಿಂತ ನೀರಿನ ದುರ್ನಾತ ಜನರ ನೆಮ್ಮದಿ ಕಸಿಯುತ್ತಿದೆ. ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಥಳೀಯರು ಸಾಂಕ್ರಾಮಿಕ ರೋಗ ಭೀತಿಯಲ್ಲಿ ದಿನದೂಡುವಂತಾಗಿದೆ. ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ಸ್ಥಳೀಯ ನಿವಾಸಿ ಅಶ್ವತ್ಥಮ್ಮ ಬೇಸರ ವ್ಯಕ್ತಪಡಿಸಿದರು.