ಮುಂಬೈ: ‘ಜಿಎಸ್ಟಿ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸದೇ ಇರುವುದಕ್ಕೆ ಸಂಬಂಧಿಸಿದಂತೆ 9 ಪ್ರಕರಣಗಳ ತನಿಖೆಗೆ ನೋಟಿಸ್ ಜಾರಿ ಮಾಡಲಾಗಿದೆ‘ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಲಾಭಕೋರತನಕ್ಕೆ ಸಂಬಂಧಿಸಿದಂತೆ 2018ರ ಜನವರಿ 31ರವರೆಗೆ ಒಟ್ಟು 221 ಅರ್ಜಿಗಳು ಸಲ್ಲಿಕೆಯಾಗಿವೆ. ಇದರಲ್ಲಿ 50 ಅರ್ಜಿಗಳನ್ನು ಒಳಗೊಂಡ 9 ಪ್ರಕರಣಗಳ ತನಿಖೆಗೆ ನೊಟೀಸ್ ನೀಡಲಾಗಿದೆ.
ಈ ದೂರುಗಳ ಪರಿಶೀಲನೆಗೆ ರಾಷ್ಟ್ರೀಯ ಲಾಭಕೋರತನ ತಡೆ ಪ್ರಾಧಿಕಾರ ಮತ್ತು ಸ್ಥಾಯಿ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಜನವರಿಯಲ್ಲಿ ₹ 88,929 ಕೋಟಿ ತೆರಿಗೆ ಸಂಗ್ರಹವಾಗುವ ಅಂದಾಜು ಮಾಡಲಾಗಿದೆ.