ಮುಂಬೈ: ‘ಭಾರತವು ಕ್ರೀಡೆಯನ್ನು ಪ್ರೀತಿಸುವ ರಾಷ್ಟ್ರ. ಆದರೆ, ನಮ್ಮ ಜನರು ಪ್ರೇಕ್ಷಕರಾಗುವುದಕ್ಕಿಂತ ಕ್ರೀಡೆಗಳಲ್ಲಿ ಭಾಗಿಯಾಗುವ ಮನೋಭಾವ ಬೆಳೆಸಿಕೊಳ್ಳಬೇಕಿದೆ’ ಎಂದು ಭಾರತದ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
ನಗರದಲ್ಲಿ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟಿಸಿದ ಅವರು ಮಾತನಾಡಿದರು.
‘ನಮ್ಮ ದೇಶದಲ್ಲಿ ಕ್ರೀಡಾ ಪಾಲ್ಗೊಳ್ಳುವಿಕೆಯ ಸಂಸ್ಕೃತಿ ಬೆಳೆಯಬೇಕು. ಅದರಿಂದ ನಮ್ಮಲ್ಲಿ ಸ್ಪರ್ಧಾ ಮನೋಭಾವ ಬೆಳೆಯುತ್ತದೆ’ ಎಂದು ಹೇಳಿದ್ದಾರೆ.
‘ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲು ಕ್ರೀಡೆ ಸಹಕಾರಿಯಾಗುತ್ತದೆ. ಯಾವುದೇ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಆಡುವುದನ್ನು ರೂಢಿಸಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.