ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು: ಪಾಕಿಸ್ತಾನ ಸಂಸತ್ನಲ್ಲಿಯೂ ಗದ್ದಲ

ಇಸ್ಲಾಮಾಬಾದ್: ಭಾರತವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ವಿಚಾರವಾಗಿ ಪಾಕಿಸ್ತಾನ ಸಂಸತ್ನಲ್ಲಿಯೂ ಮಂಗಳವಾರ ಗದ್ದಲವೇರ್ಪಟ್ಟಿದೆ.
ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದನ್ನು ವಿರೋಧಿಸಿ ಸರ್ಕಾರ ಮಂಡಿಸಿದ ನಿಲುವಳಿಯಲ್ಲಿ ಭಾರತದ ಸಂವಿಧಾನದ 370ನೇ ವಿಧಿಯ ಬಗ್ಗೆ ಉಲ್ಲೇಖಿಸದಿರುವುದಕ್ಕೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಈ ವೇಳೆ ಕೋಲಾಹಲ ಸೃಷ್ಟಿಯಾಗಿದ್ದರಿಂದ ಸ್ಪೀಕರ್ ಅಸಾದ್ ಕೈಸರ್ ಕಲಾಪವನ್ನು 20 ನಿಮಿಷ ಮುಂದೂಡಿದರು.
ಇದನ್ನೂ ಓದಿ: ಕಾಶ್ಮೀರ ಪರ ಶಾಹೀದ್ ಆಫ್ರಿದಿ ಟ್ವೀಟ್, ಗೌತಮ್ ಗಂಭೀರ್ ತಿರುಗೇಟು
‘ಭಾರತವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ್ದಕ್ಕೆ ಸಂಬಂಧಿಸಿದ ಪ್ರಮುಖ ವಿಚಾರವೇ ನಿಲುವಳಿಯಲ್ಲಿ ಇಲ್ಲ. ಅದನ್ನು ಉಲ್ಲೇಖಿಸಬೇಕಿತ್ತು’ ಎಂದು ಪ್ರತಿಪಕ್ಷದ ಸಂಸದ ರಜಾ ರಬ್ಬಾನಿ ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಾನವಹಕ್ಕುಗಳ ಸಚಿವೆ ಶಿರೀನ್ ಮಜಾರಿ, ‘ಕಾಶ್ಮೀರದ ಬಗ್ಗೆ ಚರ್ಚಿಸುವುದು ಪ್ರತಿಪಕ್ಷಕ್ಕೆ ಬೇಕಿಲ್ಲ, ಗದ್ದಲ ಉಂಟುಮಾಡುವುದಕ್ಕೇ ಪ್ರತಿಪಕ್ಷದವರು ಇಲ್ಲಿದ್ದಾರೆ’ ಎಂದು ಆರೋಪಿಸಿದರು.
ಇದನ್ನೂ ಓದಿ: ಕಾಂಗ್ರೆಸ್ಸನ್ನು ಮುಜುಗರಕ್ಕೆ ಸಿಲುಕಿಸಿದ ಅಧಿರ್ ರಂಜನ್ ಚೌಧರಿ ಹೇಳಿಕೆ
ಈ ವೇಳೆ ಮಾತನಾಡಿದ ರೈಲ್ವೆ ಸಚಿವ ಶೇಖ್ ರಶೀದ್, ನಿಲುವಳಿಯಲ್ಲಿ 370ನೇ ವಿಧಿಯ ಕುರಿತು ಉಲ್ಲೇಖಿಸುವುದು ಮುಖ್ಯ. ಆ ಕುರಿತು ಚರ್ಚೆಯಾಗಬೇಕು ಎಂದು ಪ್ರತಿಪಾದಿಸಿದರು.
ಬಳಿಕ ಸ್ಪೀಕರ್ ಸೂಚನೆ ಮೇರೆಗೆ ನಿಲುವಳಿಗೆ ತಿದ್ದುಪಡಿ ಮಾಡಿ 370ನೇ ವಿಧಿಯ ಕುರಿತು ಉಲ್ಲೇಖಿಸಲಾಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಇದನ್ನೂ ಓದಿ: ‘ದೊಡ್ಡ ತೀರ್ಮಾನ’ದ ಹಿಂದಿನ ಆರು ಮಂದಿ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಭಾರತೀಯ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ ಎಂಬ ಆರೋಪಕ್ಕೆ ಸಂಬಂಧಿಸಿ ಚರ್ಚೆ ನಡೆಸಲು ಅಧ್ಯಕ್ಷ ಆರಿಫ್ ಅಲ್ವಿ ಸಂಸತ್ನ ಜಂಟಿ ಅಧಿವೇಶನಕ್ಕೆ ಕರೆ ನೀಡಿದ್ದರು.
ಇನ್ನಷ್ಟು...
ದೇಶದೊಳಗಿದ್ದೂ ಪ್ರತ್ಯೇಕ ಸಂವಿಧಾನದ ಸವಲತ್ತು
'ಕಾಶ್ಮೀರದಲ್ಲಿ ಭಾರತೀಯರು ಜಮೀನು ಖರೀದಿಸುವಂತಿಲ್ಲ ಎಂದು 370 ವಿಧಿಯಲ್ಲಿ ಹೇಳಿಲ್ಲ
‘ಭೂಸ್ವರ್ಗ– ಭೂನರಕ’ದ ನಡುವೆ | ದಿನೇಶ್ ಅಮಿನ್ ಮಟ್ಟು ಬರಹ
ಮೂಲ ಕಾರ್ಯಸೂಚಿಯತ್ತ ಬಿಜೆಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮುಂದಿನ ಗುರಿ?
ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದತಿ ಪರಿಣಾಮಗಳೇನು?
ಎಲ್ಲ ಪ್ರಶ್ನೆಗೆ ಉತ್ತರಿಸಲು ಸಿದ್ಧ: ಪ್ರತಿಪಕ್ಷಗಳಿಗೆ ಅಮಿತ್ ಶಾ
ಜಮ್ಮು–ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಪ್ರಸ್ತಾವ ಮಂಡಿಸಿದ ಅಮಿತ್ ಶಾ
ಜಮ್ಮು–ಕಾಶ್ಮೀರ: ಸಂವಿಧಾನದ 370ನೇ ವಿಧಿ ತಿದ್ದುಪಡಿ ಬಗ್ಗೆ ರಾಷ್ಟ್ರಪತಿ ಅಧಿಸೂಚನೆ
ರಾಜ್ಯಸಭೆಯಲ್ಲಿ ಹೈಡ್ರಾಮಾ: ಸಂವಿಧಾನದ ಪ್ರತಿ ಹರಿದುಹಾಕಿದ ಪಿಡಿಪಿ ಸದಸ್ಯರು
ಕಾಶ್ಮೀರ ಮತ್ತು 35ಎ, 370: ಬದಲಾಗುತ್ತಾ ಸ್ಥಿತಿಗತಿ
35 ಎ ಕಲಂ ವಿಷಯದಲ್ಲಿ ಎಚ್ಚರದಿಂದ ವ್ಯವಹರಿಸಬೇಕು
‘35-ಎ’ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಸಂವಿಧಾನದ 370ನೇ ವಿಧಿ ತಾತ್ಕಾಲಿಕವಲ್ಲ: ಸುಪ್ರೀಂ ಕೋರ್ಟ್
ಬಿಳಿ ಬಾವುಟ ತೋರಿಸಿ, ಶವ ತಗೊಂಡು ಹೋಗಿ: ಪಾಕಿಸ್ತಾನಕ್ಕೆ ಸೇನೆಯ ಸೂಚನೆ
ಯೋಧರು, ಉಗ್ರರ ಮೃತದೇಹ ಕೊಂಡೊಯ್ಯಲು ನಿರಾಕರಿಸಿದ ಪಾಕಿಸ್ತಾನ?
ಜಮ್ಮು–ಕಾಶ್ಮೀರದಲ್ಲಿ ಕಟ್ಟೆಚ್ಚರ| ಕಣಿವೆ ತೊರೆಯಲು ಪ್ರವಾಸಿ, ಯಾತ್ರಿಕರಿಗೆ ಸೂಚನೆ
ಸೇನಾ ಕೋಟೆಯಾದ ಶ್ರೀನಗರ: ಆತಂಕ ತೀವ್ರ
ಕಾಶ್ಮೀರದಲ್ಲಿ ಉಗ್ರ ದಾಳಿ ಭೀತಿ: ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ
ಇಂದು ಸಂಪುಟ ಸಭೆ ಕಾಶ್ಮೀರ ಬಗ್ಗೆ ನಿರ್ಧಾರ?
ಶ್ರೀನಗರದಲ್ಲಿ ನಿಷೇಧಾಜ್ಞೆ: ಮೆಹಬೂಬಾ ಮುಫ್ತಿಗೆ ಗೃಹ ಬಂಧನ
ಕಾಶ್ಮೀರದಲ್ಲಿ ಮುಗ್ಧರ ಹತ್ಯೆ ನಡೆಯುತ್ತಿದೆ ಎಂದ ಆಫ್ರಿದಿಗೆ ಗಂಭೀರ್ ತೀಕ್ಷ್ಣ ತಿರುಗೇಟು
4 ಪ್ರಾಂತ್ಯ ನಿರ್ವಹಿಸಲಾರದ ಪಾಕ್; ಕಾಶ್ಮೀರವನ್ನು ನಿಯಂತ್ರಿಸುವುದೇ?: ಅಫ್ರಿದಿ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.