‘ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವರು ಡಿ.22ರಂದು ಲೋಕಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ಅಡಿಕೆ ಕ್ಯಾನ್ಸರ್ಕಾರಕ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸತತವಾಗಿ ಅಡಿಕೆ ಬಳಸುವುದು ಕ್ಯಾನ್ಸರ್ಗೆ ಕಾರಣವಾಗುತ್ತದೆ. ಅಡಿಕೆಯಿಂದ ತಯಾರಾಗುವ ಸುಗಂಧಪೂರಿತ ಉತ್ಪನ್ನಗಳ ತಯಾರಿ, ಮಾರಾಟ ನಿಷೇಧಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಗುಟ್ಕಾ ಉತ್ಪಾದನೆ ಮತ್ತು ಮಾರಾಟ ನಿಯಂತ್ರಿಸುವ ಸಂಬಂಧ ಆಹಾರ ಸುರಕ್ಷತಾ ಮಾನದಂಡ ಅನುಷ್ಠಾನಗೊಳಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿರುವುದು ಸಚಿವರ ಉತ್ತರದಲ್ಲಿ ಉಲ್ಲೇಖವಾಗಿದೆ’ ಎಂದು ಸದನದ ಗಮನ ಸೆಳೆದರು.