<p><strong>ವಿಶ್ವಸಂಸ್ಥೆ:</strong> ಭಯೋತ್ಪಾದನೆಯು ಯಾವುದೋ ಒಂದು ದೇಶಕ್ಕೆ ಅಲ್ಲ, ಇಡೀ ಜಗತ್ತಿಗೆ ಅತಿ ದೊಡ್ಡ ಸವಾಲಾಗಿದೆ. ಹಾಗಾಗಿ ಅಂತರರಾಷ್ಟ್ರೀಯ ಸಮುದಾಯವು ಉಗ್ರವಾದದ ವಿರುದ್ಧ ಒಂದಾಗಿ ನಿಲ್ಲಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಭಾರತವು ಜಗತ್ತಿಗೆ ಯುದ್ಧವನ್ನಲ್ಲ, ಬುದ್ಧನನ್ನು ನೀಡಿದ ದೇಶ. ಬುದ್ಧನ ಸಂದೇಶ ಶಾಂತಿ. ಆ ಕಾರಣಕ್ಕಾಗಿಯೇ ನಾವು ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ ಈ ಅನಿಷ್ಟದ ಬಗ್ಗೆ ಜಗತ್ತನ್ನು ಎಚ್ಚರಿಸುತ್ತಿದ್ದೇವೆ. ಈ ಎಚ್ಚರಿಕೆಯು ಬಹಳ ಗಂಭೀರವಾಗಿದೆ ಮತ್ತು ಆಕ್ರೋಶದಿಂದ ಕೂಡಿದೆ ಎಂದು ಮೋದಿ ವಿವರಿಸಿದರು.</p>.<p>ಭಯೋತ್ಪಾದನೆಯು ವಿಶ್ವಸಂಸ್ಥೆ ಸ್ಥಾಪನೆಯ ನೆಲೆಗಟ್ಟನ್ನೇ ಶಿಥಿಲಗೊಳಿಸುತ್ತದೆ. ಹಾಗಿದ್ದರೂ ಎಲ್ಲ ಸದಸ್ಯ ರಾಷ್ಟ್ರಗಳು ಭಯೋತ್ಪಾದನೆಯ ವಿರುದ್ಧ ಒಟ್ಟಾಗದಿರುವುದು ವಿಷಾದನೀಯ ಎಂದುವಿಶ್ವಸಂಸ್ಥೆಯ 74ನೇ ಮಹಾಧಿವೇಶನದಲ್ಲಿ ಮಾತನಾಡಿದ ಮೋದಿ ಹೇಳಿದರು.</p>.<p>ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ 2014ರಲ್ಲಿ ಮೋದಿ ಅವರು ಮಹಾಧಿವೇಶನದಲ್ಲಿ ಮೊದಲ ಬಾರಿ ಮಾತನಾಡಿದ್ದರು. ಈಗಿನದ್ದು ಅವರ ಎರಡನೇ ಭಾಷಣ. ಅವರು ಹಿಂದಿಯಲ್ಲಿ ಮಾತನಾಡಿದರು.</p>.<p>ಜಾಗತಿಕ ಶಾಂತಿಗಾಗಿ ಭಾರತದ ಕೊಡುಗೆಯನ್ನು ಮೋದಿ ಪ್ರಸ್ತಾಪಿಸಿದರು. ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳಲ್ಲಿ ಕೆಲಸ ಮಾಡುತ್ತಾ ಅತಿ ಹೆಚ್ಚು ಸಂಖ್ಯೆಯಲ್ಲಿ ಭಾರತದ ಯೋಧರು ಅಸುನೀಗಿದ್ದಾರೆ ಎಂದರು.</p>.<p>**</p>.<p><strong>‘ಕಾಶ್ಮೀರದಲ್ಲಿ ಅಮಾನವೀಯ ಕರ್ಫ್ಯೂ’</strong><br />ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಮಹಾಧಿವೇಶನದ ತಮ್ಮ ಮೊದಲ ಭಾಷಣದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ್ದಾರೆ. ಈ ಪ್ರದೇಶದ ಮೇಲೆ ಹೇರಿರುವ ‘ಅಮಾನವೀಯ ಕರ್ಫ್ಯೂ’ ತೆಗೆಯಬೇಕು ಮತ್ತು ಬಂಧನದಲ್ಲಿರುವವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಅಣ್ವಸ್ತ್ರ ಸಾಮರ್ಥ್ಯದ ಎರಡು ದೇಶಗಳ ನಡುವೆ ಸಂಘರ್ಷ ಏರ್ಪಟ್ಟರೆ ಅದರ ಪರಿಣಾಮ ಈ ದೇಶಗಳ ಗಡಿಗಳನ್ನು ಮೀರಿದ್ದಾಗಿರುತ್ತದೆ ಎಂದೂ ಅವರು ಎಚ್ಚರಿಸಿದರು.ಇಮ್ರಾನ್ಗೆ ಮೊದಲು ಇದೇ ವೇದಿಕೆಯಲ್ಲಿ ಮೋದಿ ಮಾತನಾಡಿದ್ದರು. ಮೋದಿ ಅವರು ಶಾಂತಿ ಪ್ರತಿಪಾದಿಸಿದರು. ಆದರೆ, ಇಮ್ರಾನ್ ಮಾತು ಅದಕ್ಕೆ ವ್ಯತಿರಿಕ್ತವಾಗಿತ್ತು.</p>.<p>*<br />ನಮ್ಮ ಉಪಕ್ರಮಗಳು ಕನಿಕರದ ಅಭಿವ್ಯಕ್ತಿಯೂ ಅಲ್ಲ, ನಾಟಕವೂ ಅಲ್ಲ. ಅವೆಲ್ಲವುಗಳಿಗೆ ಕರ್ತವ್ಯ ನಿರ್ವಹಣೆಯ ಭಾವವೇ ಸ್ಫೂರ್ತಿ ಮತ್ತು ಅದು ಮಾತ್ರ.<br /><em><strong>-ನರೇಂದ್ರ ಮೋದಿ, ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಭಯೋತ್ಪಾದನೆಯು ಯಾವುದೋ ಒಂದು ದೇಶಕ್ಕೆ ಅಲ್ಲ, ಇಡೀ ಜಗತ್ತಿಗೆ ಅತಿ ದೊಡ್ಡ ಸವಾಲಾಗಿದೆ. ಹಾಗಾಗಿ ಅಂತರರಾಷ್ಟ್ರೀಯ ಸಮುದಾಯವು ಉಗ್ರವಾದದ ವಿರುದ್ಧ ಒಂದಾಗಿ ನಿಲ್ಲಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಭಾರತವು ಜಗತ್ತಿಗೆ ಯುದ್ಧವನ್ನಲ್ಲ, ಬುದ್ಧನನ್ನು ನೀಡಿದ ದೇಶ. ಬುದ್ಧನ ಸಂದೇಶ ಶಾಂತಿ. ಆ ಕಾರಣಕ್ಕಾಗಿಯೇ ನಾವು ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ ಈ ಅನಿಷ್ಟದ ಬಗ್ಗೆ ಜಗತ್ತನ್ನು ಎಚ್ಚರಿಸುತ್ತಿದ್ದೇವೆ. ಈ ಎಚ್ಚರಿಕೆಯು ಬಹಳ ಗಂಭೀರವಾಗಿದೆ ಮತ್ತು ಆಕ್ರೋಶದಿಂದ ಕೂಡಿದೆ ಎಂದು ಮೋದಿ ವಿವರಿಸಿದರು.</p>.<p>ಭಯೋತ್ಪಾದನೆಯು ವಿಶ್ವಸಂಸ್ಥೆ ಸ್ಥಾಪನೆಯ ನೆಲೆಗಟ್ಟನ್ನೇ ಶಿಥಿಲಗೊಳಿಸುತ್ತದೆ. ಹಾಗಿದ್ದರೂ ಎಲ್ಲ ಸದಸ್ಯ ರಾಷ್ಟ್ರಗಳು ಭಯೋತ್ಪಾದನೆಯ ವಿರುದ್ಧ ಒಟ್ಟಾಗದಿರುವುದು ವಿಷಾದನೀಯ ಎಂದುವಿಶ್ವಸಂಸ್ಥೆಯ 74ನೇ ಮಹಾಧಿವೇಶನದಲ್ಲಿ ಮಾತನಾಡಿದ ಮೋದಿ ಹೇಳಿದರು.</p>.<p>ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ 2014ರಲ್ಲಿ ಮೋದಿ ಅವರು ಮಹಾಧಿವೇಶನದಲ್ಲಿ ಮೊದಲ ಬಾರಿ ಮಾತನಾಡಿದ್ದರು. ಈಗಿನದ್ದು ಅವರ ಎರಡನೇ ಭಾಷಣ. ಅವರು ಹಿಂದಿಯಲ್ಲಿ ಮಾತನಾಡಿದರು.</p>.<p>ಜಾಗತಿಕ ಶಾಂತಿಗಾಗಿ ಭಾರತದ ಕೊಡುಗೆಯನ್ನು ಮೋದಿ ಪ್ರಸ್ತಾಪಿಸಿದರು. ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳಲ್ಲಿ ಕೆಲಸ ಮಾಡುತ್ತಾ ಅತಿ ಹೆಚ್ಚು ಸಂಖ್ಯೆಯಲ್ಲಿ ಭಾರತದ ಯೋಧರು ಅಸುನೀಗಿದ್ದಾರೆ ಎಂದರು.</p>.<p>**</p>.<p><strong>‘ಕಾಶ್ಮೀರದಲ್ಲಿ ಅಮಾನವೀಯ ಕರ್ಫ್ಯೂ’</strong><br />ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಮಹಾಧಿವೇಶನದ ತಮ್ಮ ಮೊದಲ ಭಾಷಣದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ್ದಾರೆ. ಈ ಪ್ರದೇಶದ ಮೇಲೆ ಹೇರಿರುವ ‘ಅಮಾನವೀಯ ಕರ್ಫ್ಯೂ’ ತೆಗೆಯಬೇಕು ಮತ್ತು ಬಂಧನದಲ್ಲಿರುವವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಅಣ್ವಸ್ತ್ರ ಸಾಮರ್ಥ್ಯದ ಎರಡು ದೇಶಗಳ ನಡುವೆ ಸಂಘರ್ಷ ಏರ್ಪಟ್ಟರೆ ಅದರ ಪರಿಣಾಮ ಈ ದೇಶಗಳ ಗಡಿಗಳನ್ನು ಮೀರಿದ್ದಾಗಿರುತ್ತದೆ ಎಂದೂ ಅವರು ಎಚ್ಚರಿಸಿದರು.ಇಮ್ರಾನ್ಗೆ ಮೊದಲು ಇದೇ ವೇದಿಕೆಯಲ್ಲಿ ಮೋದಿ ಮಾತನಾಡಿದ್ದರು. ಮೋದಿ ಅವರು ಶಾಂತಿ ಪ್ರತಿಪಾದಿಸಿದರು. ಆದರೆ, ಇಮ್ರಾನ್ ಮಾತು ಅದಕ್ಕೆ ವ್ಯತಿರಿಕ್ತವಾಗಿತ್ತು.</p>.<p>*<br />ನಮ್ಮ ಉಪಕ್ರಮಗಳು ಕನಿಕರದ ಅಭಿವ್ಯಕ್ತಿಯೂ ಅಲ್ಲ, ನಾಟಕವೂ ಅಲ್ಲ. ಅವೆಲ್ಲವುಗಳಿಗೆ ಕರ್ತವ್ಯ ನಿರ್ವಹಣೆಯ ಭಾವವೇ ಸ್ಫೂರ್ತಿ ಮತ್ತು ಅದು ಮಾತ್ರ.<br /><em><strong>-ನರೇಂದ್ರ ಮೋದಿ, ಪ್ರಧಾನಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>