ನವದೆಹಲಿ: ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಕೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಹಾಗೂ ದೆಹಲಿ ಸರ್ಕಾರದ ನಡುವೆ ಮತ್ತೆ ಮುಸುಕಿನ ಗುದ್ದಾಟ ಆರಂಭವಾಗಿದೆ. ಬಿಜೆಪಿ ಒತ್ತಡಕ್ಕೆ ಮಣಿದು, ಯೋಜನೆಗೆ ಅಡ್ಡಿಪಡಿಸದಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಂಪುಟ ಸದಸ್ಯರು, ಶಾಸಕರು ಸಾಮೂಹಿಕವಾಗಿ ಲೆ.ಗವರ್ವರ್ ಅನಿಲ್ ಬೈಜಾಲ್ ಮನೆ ಮುಂದೆ ಧರಣಿ ನಡೆಸಿದರು.