ಕೊಲಂಬೊ: ‘ಈಸ್ಟರ್ ಭಾನುವಾರದಂದು ಬಾಂಬ್ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಭಾರತೀಯ ಗುಪ್ತಚರ ಇಲಾಖೆ ನೀಡಿದ್ದ ಎಚ್ಚರಿಕೆ ಕುರಿತು ನನಗೆ ಮಾಹಿತಿ ಇರಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ನನಗೆ ಈ ವಿಷಯ ತಿಳಿಸಿದ್ದರೆ, ದಾಳಿ ಸಂಭವಿಸುವುದನ್ನು ತಡೆಯಬಹುದಾಗಿತ್ತು’ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಹೇಳಿದ್ದಾರೆ.