2012ರಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾಗಿದ್ದಾಗ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಸದರ ನಿಧಿಯ ಮೂಲಕ ₹10 ಲಕ್ಷ ಹಣ ಕೊಡುವುದಾಗಿ ಪತ್ರ ನೀಡಿದ್ದರು. ಆದರೆ, ಆ ಹಣ ನೀಡಿಲ್ಲ. ಕಾಮಗಾರಿಗೆ ₹2 ಕೋಟಿ ಬಿಡುಗಡೆ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೂ ಪತ್ರ ಬರೆದಿದ್ದರು. ಆದರೆ, ಇಲ್ಲಿಂದಲೂ ಒಂದು ರೂಪಾಯಿ ಹಣ ಬಂದಿಲ್ಲ ಎಂದರು.