‘ಕೆ.ಆರ್.ಪೇಟೆ ಯಡಿಯೂರಪ್ಪ ಅವರ ಹುಟ್ಟೂರು. ಇಲ್ಲಿಯ ಜನರು ಜಾತಿ, ಧರ್ಮ ಮೀರಿ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ನಾರಾಯಣಗೌಡರು ರಾಜೀನಾಮೆ ನೀಡಿ ದೊಡ್ಡ ತ್ಯಾಗ ಮಾಡಿದ್ದಾರೆ. ಹೀಗಾಗಿ ಅವರನ್ನು ಪಕ್ಷ ಗೌರವಿಸುತ್ತದೆ. ಮೈತ್ರಿ ಸರ್ಕಾರ ಬೀಳಲು ಕಾಂಗ್ರೆಸ್– ಜೆಡಿಎಸ್ ಮುಖಂಡರ ಕಚ್ಚಾಟವೇ ಕಾರಣ. ಮೈತ್ರಿ ಸರ್ಕಾರವನ್ನು ಬಿಜೆಪಿ ಬೀಳಿಸಿಲ್ಲ’ ಎಂದು ಹೇಳಿದರು.