<p><strong>ಬೆಂಗಳೂರು</strong>: ಕೋವಿಡ್ನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದರೆ ₹5 ಸಾವಿರ ಪ್ರೋತ್ಸಾಹಧನ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕೋವಿಡ್ ಸೋಂಕಿಗೊಳಗಾದವರ ಪೈಕಿ ಈಗಾಗಲೇ 17,370 ಜನ ಗುಣಮುಖರಾಗಿದ್ದಾರೆ. ಐಸಿಯುನಲ್ಲಿ 597 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹವರ ಚಿಕಿತ್ಸೆಗೆ ಗುಣಮುಖರಾದವರ ಪ್ಲಾಸ್ಮಾ ಪರಿಣಾಮಕಾರಿಯಾಗಿದೆ. ಪ್ಲಾಸ್ಮಾ ದಾನ ಮಾಡಲು ಗುಣಮುಖರಾದವರು ಮುಂದೆ ಬರಬೇಕು ಎಂದು ಮನವಿ ಮಾಡಿದರು.</p>.<p>ರಾಜ್ಯದಲ್ಲಿ ಇಲ್ಲಿಯವರೆಗೆ 9 ಲಕ್ಷ ಕೋವಿಡ್ ಪರೀಕ್ಷೆಗಳನ್ನು ಪೂರ್ಣಗೊಳಿಸಲಾಗಿದೆ. ಬುಧವಾರ ಒಂದೇ ದಿನ 22,204 ಪರೀಕ್ಷೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.</p>.<p>25 ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಕೋವಿಡ್ ಪರೀಕ್ಷೆ ಮಾಡದ ಖಾಸಗಿ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಅವರು ಎಚ್ಚರಿಸಿದರು.</p>.<p>ಪ್ರಯೋಗಾಲಯಗಳಿಗೆ ಬೇಕಾದ ಉಪಕರಣಗಳ ಕೊರತೆ ಇದ್ದಲ್ಲಿ ಪೂರೈಸಲು ತಕ್ಷಣ ಕ್ರಮವಹಿಸಬೇಕು. ಎಲ್ಲ ಪ್ರಯೋಗಾಲಯಗಳನ್ನು ಒಂದು ವಾರದೊಳಗೆ ಮೇಲ್ದರ್ಜೆಗೇರಿಸಬೇಕು. ಪ್ರತಿದಿನ 500 ಪರೀಕ್ಷೆಗಳನ್ನು ಮಾಡುವತ್ತ ಗಮನಹರಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ದಾನ ಮಾಡಿದರೆ ₹5 ಸಾವಿರ ಪ್ರೋತ್ಸಾಹಧನ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕೋವಿಡ್ ಸೋಂಕಿಗೊಳಗಾದವರ ಪೈಕಿ ಈಗಾಗಲೇ 17,370 ಜನ ಗುಣಮುಖರಾಗಿದ್ದಾರೆ. ಐಸಿಯುನಲ್ಲಿ 597 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹವರ ಚಿಕಿತ್ಸೆಗೆ ಗುಣಮುಖರಾದವರ ಪ್ಲಾಸ್ಮಾ ಪರಿಣಾಮಕಾರಿಯಾಗಿದೆ. ಪ್ಲಾಸ್ಮಾ ದಾನ ಮಾಡಲು ಗುಣಮುಖರಾದವರು ಮುಂದೆ ಬರಬೇಕು ಎಂದು ಮನವಿ ಮಾಡಿದರು.</p>.<p>ರಾಜ್ಯದಲ್ಲಿ ಇಲ್ಲಿಯವರೆಗೆ 9 ಲಕ್ಷ ಕೋವಿಡ್ ಪರೀಕ್ಷೆಗಳನ್ನು ಪೂರ್ಣಗೊಳಿಸಲಾಗಿದೆ. ಬುಧವಾರ ಒಂದೇ ದಿನ 22,204 ಪರೀಕ್ಷೆ ನಡೆಸಲಾಗಿದೆ ಎಂದು ಅವರು ವಿವರಿಸಿದರು.</p>.<p>25 ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಕೋವಿಡ್ ಪರೀಕ್ಷೆ ಮಾಡದ ಖಾಸಗಿ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಅವರು ಎಚ್ಚರಿಸಿದರು.</p>.<p>ಪ್ರಯೋಗಾಲಯಗಳಿಗೆ ಬೇಕಾದ ಉಪಕರಣಗಳ ಕೊರತೆ ಇದ್ದಲ್ಲಿ ಪೂರೈಸಲು ತಕ್ಷಣ ಕ್ರಮವಹಿಸಬೇಕು. ಎಲ್ಲ ಪ್ರಯೋಗಾಲಯಗಳನ್ನು ಒಂದು ವಾರದೊಳಗೆ ಮೇಲ್ದರ್ಜೆಗೇರಿಸಬೇಕು. ಪ್ರತಿದಿನ 500 ಪರೀಕ್ಷೆಗಳನ್ನು ಮಾಡುವತ್ತ ಗಮನಹರಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>