<p><strong>ಬೆಂಗಳೂರು:</strong> ಹೆಣ್ಣೂರು ಹಾಗೂ ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿರುವ ಆಫ್ರಿಕಾ ಪ್ರಜೆಗಳ ಮನೆಗಳ ಮೇಲೆ ಮಂಗಳವಾರ ಬೆಳಿಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಅಪಾರ ಪ್ರಮಾಣದ ಖೋಟಾ ನೋಟುಗಳು ಪತ್ತೆ ಆಗಿವೆ.</p>.<p>ಈ ಸಂಬಂಧ 7 ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ₹500 ಹಾಗೂ ₹2000 ಮುಖಬೆಲೆಯ ಖೋಟಾ ನೋಟುಗಳು, ಅಮೆರಿಕನ್ ನಕಲಿ ಡಾಲರ್, ಪಾಸ್ ಪೋರ್ಟ್, ವೀಸಾವನ್ನೂ ಜಪ್ತಿ ಮಾಡಿದ್ದಾರೆ.</p>.<p>'ಖಚಿತ ಮಾಹಿತಿ ಮೇರೆಗೆ 30 ಮನೆಗಳ ಮೇಲೆ ದಾಳಿ ಮಾಡಲಾಗಿತ್ತು. ಆರೋಪಿಗಳು ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವ ಅನುಮಾನವಿದೆ' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.</p>.<p><strong>ಅಕ್ರಮ ವಾಸ 20 ಮಂದಿ ಬಂಧನ;</strong> ನಗರದಲ್ಲಿ ಅಕ್ರಮವಾಗಿ ವಾಸವಿದ್ದ 20 ಆಫ್ರಿಕಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆಯೇ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.</p>.<p>'ವೀಸಾ ಅವಧಿ ಮುಗಿದರೂ ದೇಶ ಬಿಟ್ಟು ಹೋಗಿಲ್ಲ. 120 ಸಿಬ್ಬಂದಿಯ ತಂಡ ಅವರ ಮನೆ ಮೇಲೆ ದಾಳಿ ಮಾಡಿ ಸೆರೆ ಹಿಡಿದಿದೆ' ಎಂದು ಸಂದೀಪ್ ಪಾಟೀಲ ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೆಣ್ಣೂರು ಹಾಗೂ ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ನೆಲೆಸಿರುವ ಆಫ್ರಿಕಾ ಪ್ರಜೆಗಳ ಮನೆಗಳ ಮೇಲೆ ಮಂಗಳವಾರ ಬೆಳಿಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಅಪಾರ ಪ್ರಮಾಣದ ಖೋಟಾ ನೋಟುಗಳು ಪತ್ತೆ ಆಗಿವೆ.</p>.<p>ಈ ಸಂಬಂಧ 7 ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ₹500 ಹಾಗೂ ₹2000 ಮುಖಬೆಲೆಯ ಖೋಟಾ ನೋಟುಗಳು, ಅಮೆರಿಕನ್ ನಕಲಿ ಡಾಲರ್, ಪಾಸ್ ಪೋರ್ಟ್, ವೀಸಾವನ್ನೂ ಜಪ್ತಿ ಮಾಡಿದ್ದಾರೆ.</p>.<p>'ಖಚಿತ ಮಾಹಿತಿ ಮೇರೆಗೆ 30 ಮನೆಗಳ ಮೇಲೆ ದಾಳಿ ಮಾಡಲಾಗಿತ್ತು. ಆರೋಪಿಗಳು ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವ ಅನುಮಾನವಿದೆ' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.</p>.<p><strong>ಅಕ್ರಮ ವಾಸ 20 ಮಂದಿ ಬಂಧನ;</strong> ನಗರದಲ್ಲಿ ಅಕ್ರಮವಾಗಿ ವಾಸವಿದ್ದ 20 ಆಫ್ರಿಕಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಾಳಿ ವೇಳೆಯೇ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.</p>.<p>'ವೀಸಾ ಅವಧಿ ಮುಗಿದರೂ ದೇಶ ಬಿಟ್ಟು ಹೋಗಿಲ್ಲ. 120 ಸಿಬ್ಬಂದಿಯ ತಂಡ ಅವರ ಮನೆ ಮೇಲೆ ದಾಳಿ ಮಾಡಿ ಸೆರೆ ಹಿಡಿದಿದೆ' ಎಂದು ಸಂದೀಪ್ ಪಾಟೀಲ ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>