<p><strong>ಬೆಂಗಳೂರು</strong>: ಎಸ್ಎಸ್ಎಲ್ಸಿಯಲ್ಲಿ ಶೇ 97.28ರಷ್ಟು ಅಂಕ ಗಳಿಸಿದ್ದಕ್ಕೆ ‘ಪ್ರಜಾವಾಣಿ’ಯಿಂದ ವಿದ್ಯಾರ್ಥಿ ವೇತನ ಪಡೆದಿದ್ದ ವಿದ್ಯಾರ್ಥಿಯೊಬ್ಬರು, ಪಿಯುಸಿಯಲ್ಲಿಯೂ ಶೇ 97.66ರಷ್ಟು ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಬೆಂಗಳೂರು ಉತ್ತರ ಜಿಲ್ಲೆ ಅರಿಷಿಣಗುಂಟೆಯ ಬಿಜಿಎಸ್ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಎಸ್. ಚಂದ್ರಶೇಖರ್ ವಿಜ್ಞಾನ ವಿಭಾಗದಲ್ಲಿ 586 ಅಂಕಗಳನ್ನು ಗಳಿಸಿದ್ದಾರೆ. ಗಣಿತ, ಭೌತವಿಜ್ಞಾನ, ರಾಸಾಯನಿಕ ವಿಜ್ಞಾನದಲ್ಲಿ ತಲಾ 99 ಅಂಕ ಪಡೆದಿದ್ದಾರೆ.</p>.<p>‘ಅಪ್ಪ–ಅಮ್ಮ ತಳ್ಳುಗಾಡಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಾರೆ. ಮನೆಯಲ್ಲಿ ಬಡತನವಿದೆ. ಎಸ್ಎಸ್ಎಲ್ಸಿ ನಂತರ ‘ಪ್ರಜಾವಾಣಿ’ಯಿಂದ ಸಿಕ್ಕ ನೆರವಿನಿಂದ ಪುಸ್ತಕಗಳನ್ನು ಖರೀದಿಸಿದ್ದೆ. ಮುಂದೆ ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂಬ ಹಂಬಲವಿದೆ. ಯಾರಾದರೂ ಆರ್ಥಿಕ ನೆರವು ನೀಡಿದರೆ ಸಹಾಯವಾಗುತ್ತದೆ’ ಎಂದು ಚಂದ್ರಶೇಖರ್ ಮನವಿ ಮಾಡಿದರು.</p>.<p>ಹಾಸನ ಜಿಲ್ಲೆ ಶ್ರವಣಬೆಳಗೊಳದ ಕುಂಭೇನಹಳ್ಳಿಯವರಾದ ಚಂದ್ರಶೇಖರ್ ಸದ್ಯ ಊರಿನಲ್ಲಿಯೇ ಕೃಷಿ ಕೆಲಸ ಮಾಡುತ್ತಿದ್ದಾರೆ.</p>.<p><strong>ಸಂಪರ್ಕಕ್ಕೆ</strong>: 81508–84492.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಸ್ಎಸ್ಎಲ್ಸಿಯಲ್ಲಿ ಶೇ 97.28ರಷ್ಟು ಅಂಕ ಗಳಿಸಿದ್ದಕ್ಕೆ ‘ಪ್ರಜಾವಾಣಿ’ಯಿಂದ ವಿದ್ಯಾರ್ಥಿ ವೇತನ ಪಡೆದಿದ್ದ ವಿದ್ಯಾರ್ಥಿಯೊಬ್ಬರು, ಪಿಯುಸಿಯಲ್ಲಿಯೂ ಶೇ 97.66ರಷ್ಟು ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಬೆಂಗಳೂರು ಉತ್ತರ ಜಿಲ್ಲೆ ಅರಿಷಿಣಗುಂಟೆಯ ಬಿಜಿಎಸ್ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಎಸ್. ಚಂದ್ರಶೇಖರ್ ವಿಜ್ಞಾನ ವಿಭಾಗದಲ್ಲಿ 586 ಅಂಕಗಳನ್ನು ಗಳಿಸಿದ್ದಾರೆ. ಗಣಿತ, ಭೌತವಿಜ್ಞಾನ, ರಾಸಾಯನಿಕ ವಿಜ್ಞಾನದಲ್ಲಿ ತಲಾ 99 ಅಂಕ ಪಡೆದಿದ್ದಾರೆ.</p>.<p>‘ಅಪ್ಪ–ಅಮ್ಮ ತಳ್ಳುಗಾಡಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಾರೆ. ಮನೆಯಲ್ಲಿ ಬಡತನವಿದೆ. ಎಸ್ಎಸ್ಎಲ್ಸಿ ನಂತರ ‘ಪ್ರಜಾವಾಣಿ’ಯಿಂದ ಸಿಕ್ಕ ನೆರವಿನಿಂದ ಪುಸ್ತಕಗಳನ್ನು ಖರೀದಿಸಿದ್ದೆ. ಮುಂದೆ ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂಬ ಹಂಬಲವಿದೆ. ಯಾರಾದರೂ ಆರ್ಥಿಕ ನೆರವು ನೀಡಿದರೆ ಸಹಾಯವಾಗುತ್ತದೆ’ ಎಂದು ಚಂದ್ರಶೇಖರ್ ಮನವಿ ಮಾಡಿದರು.</p>.<p>ಹಾಸನ ಜಿಲ್ಲೆ ಶ್ರವಣಬೆಳಗೊಳದ ಕುಂಭೇನಹಳ್ಳಿಯವರಾದ ಚಂದ್ರಶೇಖರ್ ಸದ್ಯ ಊರಿನಲ್ಲಿಯೇ ಕೃಷಿ ಕೆಲಸ ಮಾಡುತ್ತಿದ್ದಾರೆ.</p>.<p><strong>ಸಂಪರ್ಕಕ್ಕೆ</strong>: 81508–84492.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>