<p><strong>ಬೆಂಗಳೂರು:</strong>ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನಡೆಯಲಿದ್ದು, ನಗರದಲ್ಲೂ ಬಿಗಿ ಭದ್ರತೆ ಕೈಗೊಳ್ಳಲು ಪೊಲೀಸರು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.</p>.<p>ಭೂಮಿ ಪೂಜೆ ಹಿನ್ನೆಲೆಯಲ್ಲಿ ನಗರದಲ್ಲೂ ಕೆಲ ಸಂಘಟನೆಯವರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಉಗ್ರರ ಚಟುವಟಿಕೆ ಬಗ್ಗೆ ಕೇಂದ್ರ ಗುಪ್ತದಳವೂ ಎಚ್ಚರಿಕೆ ನೀಡಿದೆ.</p>.<p>ಇದೇ ಕಾರಣಕ್ಕೆ ಡಿಸಿಪಿಗಳಿಗೆ ಸೂಚನೆ ನೀಡಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್, 'ಬಿಗಿ ಭದ್ರತೆ ಕೈಗೊಳ್ಳಿ. ಅನುಮಾನ ಬಂದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ' ಎಂದು ಹೇಳಿದ್ದಾರೆ. ಭದ್ರತೆ ಜವಾಬ್ದಾರಿ ಹಾಗೂ ಅದರ ಉಸ್ತುವಾರಿಯನ್ನು ತಾವೇ ವಹಿಸಿಕೊಳ್ಳುವಂತೆಯೂ ತಿಳಿಸಿದ್ದಾರೆ.</p>.<p>ನಗರದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಡಿಸಿಪಿಗಳು, ಎಸಿಪಿ ಹಾಗೂ ಇನ್ಸ್ಪೆಕ್ಟರ್ಗಳ ಸಭೆ ನಡೆಸುತ್ತಿದ್ದಾರೆ. ಸೂಕ್ಷ್ಯ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಭದ್ರತೆಗೆ ಸಿಬ್ಬಂದಿ ನಿಯೋಜಿಸಲು ಚರ್ಚೆ ನಡೆಸುತ್ತಿದ್ದಾರೆ.</p>.<p>ಅಗತ್ಯವಿರುವ ಕಡೆಗಳಲ್ಲಿ ಕೆಎಸ್ಆರ್ಪಿ ಸಿಬ್ಬಂದಿಯನ್ನು ಹಾಗೂ ಗೃಹ ರಕ್ಷಕರನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಮಂಗಳವಾರ ರಾತ್ರಿಯಿಂದಲೇ ನಗರದಾದ್ಯಂತ ಗಸ್ತು ಹೆಚ್ಚಿಸಲು ಡಿಸಿಪಿಗಳು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನಡೆಯಲಿದ್ದು, ನಗರದಲ್ಲೂ ಬಿಗಿ ಭದ್ರತೆ ಕೈಗೊಳ್ಳಲು ಪೊಲೀಸರು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.</p>.<p>ಭೂಮಿ ಪೂಜೆ ಹಿನ್ನೆಲೆಯಲ್ಲಿ ನಗರದಲ್ಲೂ ಕೆಲ ಸಂಘಟನೆಯವರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಉಗ್ರರ ಚಟುವಟಿಕೆ ಬಗ್ಗೆ ಕೇಂದ್ರ ಗುಪ್ತದಳವೂ ಎಚ್ಚರಿಕೆ ನೀಡಿದೆ.</p>.<p>ಇದೇ ಕಾರಣಕ್ಕೆ ಡಿಸಿಪಿಗಳಿಗೆ ಸೂಚನೆ ನೀಡಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್, 'ಬಿಗಿ ಭದ್ರತೆ ಕೈಗೊಳ್ಳಿ. ಅನುಮಾನ ಬಂದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ' ಎಂದು ಹೇಳಿದ್ದಾರೆ. ಭದ್ರತೆ ಜವಾಬ್ದಾರಿ ಹಾಗೂ ಅದರ ಉಸ್ತುವಾರಿಯನ್ನು ತಾವೇ ವಹಿಸಿಕೊಳ್ಳುವಂತೆಯೂ ತಿಳಿಸಿದ್ದಾರೆ.</p>.<p>ನಗರದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಡಿಸಿಪಿಗಳು, ಎಸಿಪಿ ಹಾಗೂ ಇನ್ಸ್ಪೆಕ್ಟರ್ಗಳ ಸಭೆ ನಡೆಸುತ್ತಿದ್ದಾರೆ. ಸೂಕ್ಷ್ಯ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಭದ್ರತೆಗೆ ಸಿಬ್ಬಂದಿ ನಿಯೋಜಿಸಲು ಚರ್ಚೆ ನಡೆಸುತ್ತಿದ್ದಾರೆ.</p>.<p>ಅಗತ್ಯವಿರುವ ಕಡೆಗಳಲ್ಲಿ ಕೆಎಸ್ಆರ್ಪಿ ಸಿಬ್ಬಂದಿಯನ್ನು ಹಾಗೂ ಗೃಹ ರಕ್ಷಕರನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಮಂಗಳವಾರ ರಾತ್ರಿಯಿಂದಲೇ ನಗರದಾದ್ಯಂತ ಗಸ್ತು ಹೆಚ್ಚಿಸಲು ಡಿಸಿಪಿಗಳು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>