ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಕಲಬುರ್ಗಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ನಿಗಾ ವಹಿಸಬೇಕು. ಗಡಿ ಜಿಲ್ಲೆಗಳಾದ ಚಾಮರಾಜನಗರ, ಮಡಿಕೇರಿ, ಬೆಳಗಾವಿ, ಮಂಗಳೂರು, ಕೋಲಾರ, ಕಲಬುರ್ಗಿ ಜಿಲ್ಲೆಗಳ ಗಡಿ ಪೋಸ್ಟ್ಗಳಲ್ಲೂ ಸೂಕ್ತ ಬಂದೋಬಸ್ತ್ ಮಾಡಿ, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾವಹಿಸಲು ಸೂಚನೆ ನೀಡಲಾಗಿದೆ ಎಂದರು.