<figcaption>""</figcaption>.<p><strong>ಬೆಂಗಳೂರು: </strong>ಕೋವಿಡ್ಗೆ ಬಿಬಿಎಂಪಿಯ ಇಬ್ಬರು ಅಧಿಕಾರಿಗಳು ಮಂಗಳವಾರ ಮೃತಪಟ್ಟಿದ್ದಾರೆ. ಈ ಸೋಂಕಿಗೆ ಪಾಲಿಕೆ ಅಧಿಕಾರಿಗಳು ಸಾವಿಗೀಡಾಗಿರುವುದು ಇದೇ ಮೊದಲು.</p>.<p>ಯಲಹಂಕ ಹಳೆಪಟ್ಟಣ ಉಪವಿಭಾಗದ ಕಂದಾಯ ಮೌಲ್ಯಮಾಪಕ ನಟರಾಜ್ (58) ಹಾಗೂ ಚಾಮರಾಜಪೇಟೆ ಉಪವಿಭಾಗದ ಕಂದಾಯ ಮೌಲ್ಯಮಾಪಕ ತಿಮ್ಮಯ್ಯ (54) ಮೃತರು.</p>.<p>ನಟರಾಜ್ ಅವರು ಕೋವಿಡ್ ಲಕ್ಷಣಗಳು ಕಂಡು ಬಂದಿದ್ದರಿಂದ ಜೂನ್ 27ರಂದು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.</p>.<p>ನಟರಾಜ್ ಅವರು ನಾಗೇನಹಳ್ಳಿ ನಾರಾಯಣಪುರದ ನಿವಾಸಿ. ಬಿಬಿಎಂಪಿಯಲ್ಲಿ 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಂದಾಯ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.</p>.<p>ಅವರ ಪುತ್ರಿ ವೈದ್ಯೆಯಾಗಿದ್ದು, ಮೊದಲು ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ಪತ್ನಿಗೂ ಸೋಂಕು ಹರಡಿತ್ತು. ಪುತ್ರಿ ಹಾಗೂ ಪತ್ನಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮನೆಯವರಿಗೆ ಕೋವಿಡ್ ಸೋಂಕು ಕಂಡುಬಂದಿದ್ದರಿಂದ ನಟರಾಜ್ ಅವರು ಅವರು ಸುಮರು 25 ದಿನಗಳಿಂದ ಕಚೇರಿಗೆ ಹಾಜರಾಗಿರಲಿಲ್ಲ.</p>.<div style="text-align:center"><figcaption><em><strong>ತಿಮ್ಮಯ್ಯ</strong></em></figcaption></div>.<p>ತಿಮ್ಮಯ್ಯ ಅವರು ಶನಿವಾರದವರೆಗೂ ಕಚೇರಿಗೆ ಹೋಗಿದ್ದರು. ಮೂರು ದಿನಗಳಿಂದವರಿಗೆ ಸೋಂಕುನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹಾಗಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆ ಸಲುವಾಗಿ ಸೋಮವಾರವಷ್ಟೇ ಅವರು ದಾಖಲಾಗಿದ್ದರು.</p>.<p>ತಿಮ್ಮಯ್ಯ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಜಗಜೀವನರಾಂ ನಗರದಲ್ಲಿ ವಾಸವಿದ್ದರು ಎಂದು ಅವರ ಸಹೋದ್ಯೊಗಿಗಳು ತಿಳಿಸಿದ್ದಾರೆ.</p>.<p>ನಟರಾಜ್ ಹಾಗೂ ತಿಮ್ಮಯ್ಯ ಕುಟುಂಬಕ್ಕೆ ಕೋವಿಡ್ ವಿಮೆಯ ಮೊತ್ತವಾದ ₹ 30 ಲಕ್ಷವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷ ಎ.ಅಮೃತರಾಜ್ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಘವು ಪತ್ರ ಬರೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು: </strong>ಕೋವಿಡ್ಗೆ ಬಿಬಿಎಂಪಿಯ ಇಬ್ಬರು ಅಧಿಕಾರಿಗಳು ಮಂಗಳವಾರ ಮೃತಪಟ್ಟಿದ್ದಾರೆ. ಈ ಸೋಂಕಿಗೆ ಪಾಲಿಕೆ ಅಧಿಕಾರಿಗಳು ಸಾವಿಗೀಡಾಗಿರುವುದು ಇದೇ ಮೊದಲು.</p>.<p>ಯಲಹಂಕ ಹಳೆಪಟ್ಟಣ ಉಪವಿಭಾಗದ ಕಂದಾಯ ಮೌಲ್ಯಮಾಪಕ ನಟರಾಜ್ (58) ಹಾಗೂ ಚಾಮರಾಜಪೇಟೆ ಉಪವಿಭಾಗದ ಕಂದಾಯ ಮೌಲ್ಯಮಾಪಕ ತಿಮ್ಮಯ್ಯ (54) ಮೃತರು.</p>.<p>ನಟರಾಜ್ ಅವರು ಕೋವಿಡ್ ಲಕ್ಷಣಗಳು ಕಂಡು ಬಂದಿದ್ದರಿಂದ ಜೂನ್ 27ರಂದು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.</p>.<p>ನಟರಾಜ್ ಅವರು ನಾಗೇನಹಳ್ಳಿ ನಾರಾಯಣಪುರದ ನಿವಾಸಿ. ಬಿಬಿಎಂಪಿಯಲ್ಲಿ 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಂದಾಯ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.</p>.<p>ಅವರ ಪುತ್ರಿ ವೈದ್ಯೆಯಾಗಿದ್ದು, ಮೊದಲು ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ಪತ್ನಿಗೂ ಸೋಂಕು ಹರಡಿತ್ತು. ಪುತ್ರಿ ಹಾಗೂ ಪತ್ನಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮನೆಯವರಿಗೆ ಕೋವಿಡ್ ಸೋಂಕು ಕಂಡುಬಂದಿದ್ದರಿಂದ ನಟರಾಜ್ ಅವರು ಅವರು ಸುಮರು 25 ದಿನಗಳಿಂದ ಕಚೇರಿಗೆ ಹಾಜರಾಗಿರಲಿಲ್ಲ.</p>.<div style="text-align:center"><figcaption><em><strong>ತಿಮ್ಮಯ್ಯ</strong></em></figcaption></div>.<p>ತಿಮ್ಮಯ್ಯ ಅವರು ಶನಿವಾರದವರೆಗೂ ಕಚೇರಿಗೆ ಹೋಗಿದ್ದರು. ಮೂರು ದಿನಗಳಿಂದವರಿಗೆ ಸೋಂಕುನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹಾಗಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆ ಸಲುವಾಗಿ ಸೋಮವಾರವಷ್ಟೇ ಅವರು ದಾಖಲಾಗಿದ್ದರು.</p>.<p>ತಿಮ್ಮಯ್ಯ ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಜಗಜೀವನರಾಂ ನಗರದಲ್ಲಿ ವಾಸವಿದ್ದರು ಎಂದು ಅವರ ಸಹೋದ್ಯೊಗಿಗಳು ತಿಳಿಸಿದ್ದಾರೆ.</p>.<p>ನಟರಾಜ್ ಹಾಗೂ ತಿಮ್ಮಯ್ಯ ಕುಟುಂಬಕ್ಕೆ ಕೋವಿಡ್ ವಿಮೆಯ ಮೊತ್ತವಾದ ₹ 30 ಲಕ್ಷವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷ ಎ.ಅಮೃತರಾಜ್ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಘವು ಪತ್ರ ಬರೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>