ಮೈಸೂರು: ಬ್ರಾಹ್ಮಣರಿಗೆ ಜಾತಿ ಪ್ರಮಾಣಪತ್ರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಬುಧವಾರ ಇಲ್ಲಿ ತಿಳಿಸಿದರು.
‘ಶಾಸಕರು, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು ಸೇರಿದಂತೆ ಈ ಸಮುದಾಯದ ಹಲವರು ನನಗೆ ಮನವಿ ಮಾಡಿದ್ದರು. ಹೀಗಾಗಿ, ಕಂದಾಯ ಇಲಾಖೆ ಈ ತೀರ್ಮಾನ ಕೈಗೊಂಡಿದೆ. ತಾಲ್ಲೂಕು ಕಚೇರಿಗಳಲ್ಲಿ ಸದ್ಯದಲ್ಲೇ ಪ್ರಮಾಣಪತ್ರ ಸಿಗಲಿದೆ’ ಎಂದರು.