ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂದೆಗೆ ವಿಷ ಹಾಕಿದ ಮಕ್ಕಳು

Last Updated 26 ಜುಲೈ 2020, 4:31 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಮಕ್ಕಳು ಆಹಾರದಲ್ಲಿ ವಿಷ ಬೆರೆಸಿ ತಂದೆಯನ್ನೇ ಹತ್ಯೆ ಮಾಡಲು ಯತ್ನಿಸಿದ ಘಟನೆ ಇಲ್ಲಿನ ಗುತ್ತಿಗಾರು ಬಳಿಯ ನಾಲ್ಕೂರು ಗ್ರಾಮದ ಅಂಜೇರಿಯಲ್ಲಿ ಗುರುವಾರ ನಡೆದಿದೆ.

ಹೊನ್ನಪ್ಪ ನಾಯ್ಕ ಅಂಜೇರಿ ಎಂಬುವವರ ಮಕ್ಕಳಾದ ದೇವಿಪ್ರಸಾದ್ (33) ಹಾಗೂ ಲೋಕೇಶ್ (35) ಎಂಬುವವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮನೆಯಲ್ಲಿ ಗುರುವಾರ ರಾತ್ರಿ ಹಂದಿ ಮಾಂಸದ ಅಡುಗೆ ಮಾಡಲಾಗಿತ್ತು. ಮನೆ ಮಂದಿ ಊಟ ಮಾಡಿದ ಬಳಿಕ, ಮಗ ದೇವಿಪ್ರಸಾದ್ ಅಡುಗೆಗೆ ವಿಷ ಬೆರೆಸಿಟ್ಟಿದ್ದರು. ಇದಕ್ಕೆ ಇನ್ನೊಬ್ಬ ಮಗ ಲೋಕೇಶ್ ಕೂಡಾ ಸಹಕಾರ ನೀಡಿದ್ದರು ಎನ್ನಲಾಗಿದೆ. ಬೆಳಿಗ್ಗೆ ಮಾಂಸದ ಅಡುಗೆ ಸೇವಿಸಿದ ತಂದೆ ವಾಂತಿ ಮಾಡಿಕೊಂಡು, ತೀವ್ರ ಅಸ್ವಸ್ಥಗೊಂಡಾಗ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇದೀಗ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹೊನ್ನಪ್ಪ ಅವರ ಪತ್ನಿ ಸವಿತಾ ದೂರು ನೀಡಿದ್ದು, ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿ ವಿಚಾರವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT