<p><strong>ಬೆಂಗಳೂರು:</strong> ಕೋವಿಡ್ ಪಾಸಿಟಿವ್ ಆಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲೂ ತಮ್ಮ ದಿನಚರಿ ಬದಲಿಸಿಕೊಂಡಿಲ್ಲ. ಕಚೇರಿ ಕೆಲಸವನ್ನೂ ಅಲ್ಲಿಂದಲೇ ನಿರ್ವಹಿಸಿದರು.</p>.<p>ಬೆಳಿಗ್ಗೆ 6 ಗಂಟೆಗೆ ಎದ್ದು ಆಸ್ಪತ್ರೆಯ ಕೊಠಡಿಯಲ್ಲೇ ವಾಕ್ ಮಾಡಿದರು. ಬಳಿಕ ಪತ್ರಿಕೆಗಳನ್ನು ತರಿಸಿ ಓದಿದರು. ಮಧ್ಯಾಹ್ನದ ಬಳಿಕ ಕೆಲ ಸಮಯ ಪುಸ್ತಕ ಓದಿದರು. ಕೆಲ ಪ್ರಮುಖ ಕಡತಗಳನ್ನು ಪರಿಶೀಲಿಸಿ ಸಹಿ ಹಾಕಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ಸುಂದರಕಾಂಡ, ಚಾಣಕ್ಯ, ಮಹಾಭಾರತ, ವಿವೇಕಾನಂದ ಕುರಿತ ಪುಸ್ತಕಗಳನ್ನು ಅವರು ಓದಲು ತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಅಧಿಕಾರಿಯೊಬ್ಬರು ತಿಳಿಸಿದರು. ಸೋಮವಾರವೂ ಕೆಲ ಕಡತಗಳನ್ನು ನೋಡಿದ್ದು, ದೂರವಾಣಿಯಲ್ಲಿ ಅಧಿಕಾರಿಗಳಿಂದ ವಿವರ ಪಡೆದರು.</p>.<p>ನರ್ಸ್ಗಳು ಅಥವಾ ವೈದ್ಯರ ಮೂಲಕ ವಾರ್ಡ್ಗೆ ಕಡತಗಳನ್ನು ತರಿಸಿಕೊಳ್ಳುತ್ತಾರೆ. ಪರಿಶೀಲನೆ ಬಳಿಕ ಕಡತವನ್ನು ಸ್ಯಾನಿಟೈಸ್ ಮಾಡಿ, ಬಿಸಿ ಮಾಡಿ 24 ಗಂಟೆಗಳ ಬಳಿಕ ಹಿಂದಿರುಗಿಸಲಾಗುತ್ತಿದೆ.ಕೊರೊನಾ ಸೇನಾನಿಗಳಿಗೆ ₹30 ಲಕ್ಷ ವಿಮೆ ಸಂಬಂಧಿತ ಕಡತಗಳಿಗೆ ಸಹಿ ಮಾಡಿದರು ಎಂದು ಅವರು ಹೇಳಿದರು.</p>.<p>ಎದುರಿನ ಕೊಠಡಿಯಲ್ಲೇ ಸಿದ್ದರಾಮಯ್ಯ: ಮಣಿಪಾಲ್ ಆಸ್ಪತ್ರೆಗೆದಾಖಲಾಗಿರುವ ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಿ.ಎಂ ಅವರ ಕೊಠಡಿ ಎದುರಿನ ಕೊಠಡಿಯನ್ನೇ ನೀಡಲಾಗಿದೆ. ಉಭಯ ವೈದ್ಯ ಸಿಬ್ಬಂದಿಗಳಿಗಷ್ಟೇ ಪ್ರವೇಶವಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಪಾಸಿಟಿವ್ ಆಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲೂ ತಮ್ಮ ದಿನಚರಿ ಬದಲಿಸಿಕೊಂಡಿಲ್ಲ. ಕಚೇರಿ ಕೆಲಸವನ್ನೂ ಅಲ್ಲಿಂದಲೇ ನಿರ್ವಹಿಸಿದರು.</p>.<p>ಬೆಳಿಗ್ಗೆ 6 ಗಂಟೆಗೆ ಎದ್ದು ಆಸ್ಪತ್ರೆಯ ಕೊಠಡಿಯಲ್ಲೇ ವಾಕ್ ಮಾಡಿದರು. ಬಳಿಕ ಪತ್ರಿಕೆಗಳನ್ನು ತರಿಸಿ ಓದಿದರು. ಮಧ್ಯಾಹ್ನದ ಬಳಿಕ ಕೆಲ ಸಮಯ ಪುಸ್ತಕ ಓದಿದರು. ಕೆಲ ಪ್ರಮುಖ ಕಡತಗಳನ್ನು ಪರಿಶೀಲಿಸಿ ಸಹಿ ಹಾಕಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ಸುಂದರಕಾಂಡ, ಚಾಣಕ್ಯ, ಮಹಾಭಾರತ, ವಿವೇಕಾನಂದ ಕುರಿತ ಪುಸ್ತಕಗಳನ್ನು ಅವರು ಓದಲು ತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಅಧಿಕಾರಿಯೊಬ್ಬರು ತಿಳಿಸಿದರು. ಸೋಮವಾರವೂ ಕೆಲ ಕಡತಗಳನ್ನು ನೋಡಿದ್ದು, ದೂರವಾಣಿಯಲ್ಲಿ ಅಧಿಕಾರಿಗಳಿಂದ ವಿವರ ಪಡೆದರು.</p>.<p>ನರ್ಸ್ಗಳು ಅಥವಾ ವೈದ್ಯರ ಮೂಲಕ ವಾರ್ಡ್ಗೆ ಕಡತಗಳನ್ನು ತರಿಸಿಕೊಳ್ಳುತ್ತಾರೆ. ಪರಿಶೀಲನೆ ಬಳಿಕ ಕಡತವನ್ನು ಸ್ಯಾನಿಟೈಸ್ ಮಾಡಿ, ಬಿಸಿ ಮಾಡಿ 24 ಗಂಟೆಗಳ ಬಳಿಕ ಹಿಂದಿರುಗಿಸಲಾಗುತ್ತಿದೆ.ಕೊರೊನಾ ಸೇನಾನಿಗಳಿಗೆ ₹30 ಲಕ್ಷ ವಿಮೆ ಸಂಬಂಧಿತ ಕಡತಗಳಿಗೆ ಸಹಿ ಮಾಡಿದರು ಎಂದು ಅವರು ಹೇಳಿದರು.</p>.<p>ಎದುರಿನ ಕೊಠಡಿಯಲ್ಲೇ ಸಿದ್ದರಾಮಯ್ಯ: ಮಣಿಪಾಲ್ ಆಸ್ಪತ್ರೆಗೆದಾಖಲಾಗಿರುವ ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಿ.ಎಂ ಅವರ ಕೊಠಡಿ ಎದುರಿನ ಕೊಠಡಿಯನ್ನೇ ನೀಡಲಾಗಿದೆ. ಉಭಯ ವೈದ್ಯ ಸಿಬ್ಬಂದಿಗಳಿಗಷ್ಟೇ ಪ್ರವೇಶವಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>