<p><strong>ಬೆಂಗಳೂರು</strong>: ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಾಗುವ ಘೋಷಣೆಯ ಬೆನ್ನಲ್ಲೇ, ನಗರದಲ್ಲಿ ನೆಲೆಸಿರುವ ಹಲವರು ತಮ್ಮೂರಿನತ್ತ ಹೊರಟಿದ್ದಾರೆ.</p>.<p>ಕಾರ್ಮಿಕರು ಹಾಗೂ ಉದ್ಯೋಗಸ್ಥರು ಕುಟುಂಬ ಸಮೇತರಾಗಿ ಮನೆ ಖಾಲಿ ಮಾಡಿಕೊಂಡು ಬಸ್ ಹಾಗೂ ಖಾಸಗಿ ವಾಹನಗಳ ಮೂಲಕ ಸೋಮವಾರ ಬೆಳಿಗ್ಗೆಯಿಂದಲೇ ತಮ್ಮೂರಿನತ್ತ ಪ್ರಯಾಣ ಬೆಳೆಸುತ್ತಿದ್ದಾರೆ.</p>.<p>ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಸ್ಯಾಟ್ಲೈಟ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಗಂಟುಮೂಟೆ ಸಮೇತರಾಗಿ ಊರಿಗೆ ಹೊರಟಿದ್ದು ಕಂಡುಬಂತು.</p>.<p>ರಾಯಚೂರು, ಬೆಳಗಾವಿ, ಬೀದರ್, ಬಳ್ಳಾರಿ, ಕಲಬುರ್ಗಿ, ಕೊಪ್ಪಳ, ಹೊಸಪೇಟೆ ಹಾಗೂ ಇತರೆ ಊರಿನ ಜನರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಪ್ರತಿಯೊಬ್ಬ ಪ್ರಯಾಣಿಕರ ಹೆಸರು ಹಾಗೂ ವಿಳಾಸ ಮಾಹಿತಿ ಪಡೆದುಕೊಂಡ ಕೆಎಸ್ಆರ್ಟಿಸಿ ಸಿಬ್ಬಂದಿ, ಬಸ್ಸಿಗೆ ಹತ್ತಲು ಅವಕಾಶ ನೀಡಿದರು.</p>.<p>ಸೋಮವಾರ ಬೆಳಿಗ್ಗೆಯಿಂದಲೇ ಬಸ್ಗಳ ಸಂಚಾರ ಆರಂಭವಾಗಿವೆ.</p>.<p><strong>ಟೋಲ್ನಲ್ಲಿ ದಟ್ಟಣೆ: </strong>ತುಮಕೂರು ರಸ್ತೆಯಲ್ಲಿರುವ ನೆಲಮಂಗಲ ಟೋಲ್ ಗೇಟ್ನಲ್ಲೂ ವಾಹನಗಳ ದಟ್ಟಣೆ ಕಂಡುಬರುತ್ತಿದೆ.</p>.<p>ಕಳೆದ ಸೋಮವಾರಕ್ಕಿಂತ ಇಂದು ವಾಹನಗಳ ಸಂಖ್ಯೆ ಹೆಚ್ಚಿದೆ. ಪೀಠೋಪಕರಣ ಹಾಗೂ ಇತರೆ ವಸ್ತುಗಳನ್ನು ತುಂಬಿಕೊಂಡ ವಾಹನಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿವೆ.</p>.<p><strong>ನಿಧಾನಗತಿಯಲ್ಲಿ ವಾಹನಗಳ ಓಡಾಟ</strong></p>.<p>ನಗರದ ತುಮಕೂರು ರಸ್ತೆ ಹಾಗೂ ಮೈಸೂರು ರಸ್ತೆಯಲ್ಲಿ ವಿಪರೀತ ಸಂಚಾರ ದಟ್ಟಣೆ ಕಂಡುಬರುತ್ತಿದ್ದು, ವಾಹನಗಳ ಓಡಾಟ ನಿಧಾನಗತಿಯಲ್ಲಿ ಇದೆ.</p>.<p>ಮೆಜೆಸ್ಟಿಕ್ನಿಂದ ಹೆಚ್ಚುವರಿ ಬಸ್ಗಳನ್ನು ಬಿಡಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳತ್ತ ಹೆಚ್ಚು ಬಸ್ಗಳು ಹೊರಟಿವೆ. ಯಶವಂತಪುರ, ಪೀಣ್ಯ, ಜಾಲಹಳ್ಳಿ ಹಾಗೂ ನೆಲಮಂಗಲ ಟೋಲ್ ಗೇಟ್ನಲ್ಲೂ ದಟ್ಟಣೆ ಇದೆ.</p>.<p>ವಾಹನಗಳಿಗೆ ದಾರಿ ಮಾಡಿಕೊಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸೋಮವಾರ ಬೆಳಿಗ್ಗೆಯಿಂದಲೇ ಜನರು ತಮ್ಮೂರಿನತ್ತ ಹೊರಟಿದ್ದಾರೆ. ಖಾಸಗಿ ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ.</p>.<p>'ಒಂದು ವಾರ ಲಾಕ್ಡೌನ್ ಆದರೆ ನಮಗೆ ಕೆಲಸವಿಲ್ಲ. ಊಟಕ್ಕೂ ಕಷ್ಟವಾಗುತ್ತದೆ. ಅದಕ್ಕೆ ಊರಿಗೆ ಹೊರಟಿದ್ದೇವೆ' ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.</p>.<p><strong>ಎರಡು ದಿನ ಹೆಚ್ಚುವರಿಯಾಗಿ 800 ಬಸ್ಗಳ ಸಂಚಾರ</strong></p>.<p>ಸೋಮವಾರ ಮತ್ತು ಮಂಗಳವಾರ ತಲಾ 800 ಬಸ್ಸುಗಳನ್ನು ಬೆಂಗಳೂರಿನಿಂದ ರಾಜ್ಯದ ಇತರೆ ಸ್ಥಳಗಳಿಗೆ ಹೆಚ್ಚುವರಿಯಾಗಿ ಕಾರ್ಯಚರಣೆ ಮಾಡಲು ಕೆಎಸ್ಆರ್ಟಿಸಿ ಮುಂದಾಗಿದೆ.</p>.<p>ಸೋಮವಾರ ಬೆಳಿಗ್ಗೆ 10 ಗಂಟೆಯವರೆಗೆ 249 ಬಸ್ಸುಗಳನ್ನು ಬೆಂಗಳೂರಿನಿಂದ ಕಾರ್ಯಚರಣೆಗೊಳಿಸಿದ್ದು, 6641 ಪ್ರಯಾಣಿಕರು ಈಗಾಗಲೇ ಪ್ರಯಾಣಿಸಿದ್ದಾರೆ.</p>.<p>231 ಬಸ್ಸುಗಳು ಮುಂಗಡ ಬುಕ್ಕಿಂಗ್ ಆಗಿವೆ. ಸಾಮಾಜಿಕ ಅಂತರ ಕಾಪಾಡಿ, ಪ್ರತಿಯೊಬ್ಬ ಪ್ರಯಾಣಿಕರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಕೆಎಸ್ಆರ್ಟಿಸಿ ಪತ್ರಿಕಾ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಾಗುವ ಘೋಷಣೆಯ ಬೆನ್ನಲ್ಲೇ, ನಗರದಲ್ಲಿ ನೆಲೆಸಿರುವ ಹಲವರು ತಮ್ಮೂರಿನತ್ತ ಹೊರಟಿದ್ದಾರೆ.</p>.<p>ಕಾರ್ಮಿಕರು ಹಾಗೂ ಉದ್ಯೋಗಸ್ಥರು ಕುಟುಂಬ ಸಮೇತರಾಗಿ ಮನೆ ಖಾಲಿ ಮಾಡಿಕೊಂಡು ಬಸ್ ಹಾಗೂ ಖಾಸಗಿ ವಾಹನಗಳ ಮೂಲಕ ಸೋಮವಾರ ಬೆಳಿಗ್ಗೆಯಿಂದಲೇ ತಮ್ಮೂರಿನತ್ತ ಪ್ರಯಾಣ ಬೆಳೆಸುತ್ತಿದ್ದಾರೆ.</p>.<p>ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಸ್ಯಾಟ್ಲೈಟ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಗಂಟುಮೂಟೆ ಸಮೇತರಾಗಿ ಊರಿಗೆ ಹೊರಟಿದ್ದು ಕಂಡುಬಂತು.</p>.<p>ರಾಯಚೂರು, ಬೆಳಗಾವಿ, ಬೀದರ್, ಬಳ್ಳಾರಿ, ಕಲಬುರ್ಗಿ, ಕೊಪ್ಪಳ, ಹೊಸಪೇಟೆ ಹಾಗೂ ಇತರೆ ಊರಿನ ಜನರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಪ್ರತಿಯೊಬ್ಬ ಪ್ರಯಾಣಿಕರ ಹೆಸರು ಹಾಗೂ ವಿಳಾಸ ಮಾಹಿತಿ ಪಡೆದುಕೊಂಡ ಕೆಎಸ್ಆರ್ಟಿಸಿ ಸಿಬ್ಬಂದಿ, ಬಸ್ಸಿಗೆ ಹತ್ತಲು ಅವಕಾಶ ನೀಡಿದರು.</p>.<p>ಸೋಮವಾರ ಬೆಳಿಗ್ಗೆಯಿಂದಲೇ ಬಸ್ಗಳ ಸಂಚಾರ ಆರಂಭವಾಗಿವೆ.</p>.<p><strong>ಟೋಲ್ನಲ್ಲಿ ದಟ್ಟಣೆ: </strong>ತುಮಕೂರು ರಸ್ತೆಯಲ್ಲಿರುವ ನೆಲಮಂಗಲ ಟೋಲ್ ಗೇಟ್ನಲ್ಲೂ ವಾಹನಗಳ ದಟ್ಟಣೆ ಕಂಡುಬರುತ್ತಿದೆ.</p>.<p>ಕಳೆದ ಸೋಮವಾರಕ್ಕಿಂತ ಇಂದು ವಾಹನಗಳ ಸಂಖ್ಯೆ ಹೆಚ್ಚಿದೆ. ಪೀಠೋಪಕರಣ ಹಾಗೂ ಇತರೆ ವಸ್ತುಗಳನ್ನು ತುಂಬಿಕೊಂಡ ವಾಹನಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿವೆ.</p>.<p><strong>ನಿಧಾನಗತಿಯಲ್ಲಿ ವಾಹನಗಳ ಓಡಾಟ</strong></p>.<p>ನಗರದ ತುಮಕೂರು ರಸ್ತೆ ಹಾಗೂ ಮೈಸೂರು ರಸ್ತೆಯಲ್ಲಿ ವಿಪರೀತ ಸಂಚಾರ ದಟ್ಟಣೆ ಕಂಡುಬರುತ್ತಿದ್ದು, ವಾಹನಗಳ ಓಡಾಟ ನಿಧಾನಗತಿಯಲ್ಲಿ ಇದೆ.</p>.<p>ಮೆಜೆಸ್ಟಿಕ್ನಿಂದ ಹೆಚ್ಚುವರಿ ಬಸ್ಗಳನ್ನು ಬಿಡಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳತ್ತ ಹೆಚ್ಚು ಬಸ್ಗಳು ಹೊರಟಿವೆ. ಯಶವಂತಪುರ, ಪೀಣ್ಯ, ಜಾಲಹಳ್ಳಿ ಹಾಗೂ ನೆಲಮಂಗಲ ಟೋಲ್ ಗೇಟ್ನಲ್ಲೂ ದಟ್ಟಣೆ ಇದೆ.</p>.<p>ವಾಹನಗಳಿಗೆ ದಾರಿ ಮಾಡಿಕೊಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸೋಮವಾರ ಬೆಳಿಗ್ಗೆಯಿಂದಲೇ ಜನರು ತಮ್ಮೂರಿನತ್ತ ಹೊರಟಿದ್ದಾರೆ. ಖಾಸಗಿ ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ.</p>.<p>'ಒಂದು ವಾರ ಲಾಕ್ಡೌನ್ ಆದರೆ ನಮಗೆ ಕೆಲಸವಿಲ್ಲ. ಊಟಕ್ಕೂ ಕಷ್ಟವಾಗುತ್ತದೆ. ಅದಕ್ಕೆ ಊರಿಗೆ ಹೊರಟಿದ್ದೇವೆ' ಎಂದು ಪ್ರಯಾಣಿಕರು ಹೇಳುತ್ತಿದ್ದಾರೆ.</p>.<p><strong>ಎರಡು ದಿನ ಹೆಚ್ಚುವರಿಯಾಗಿ 800 ಬಸ್ಗಳ ಸಂಚಾರ</strong></p>.<p>ಸೋಮವಾರ ಮತ್ತು ಮಂಗಳವಾರ ತಲಾ 800 ಬಸ್ಸುಗಳನ್ನು ಬೆಂಗಳೂರಿನಿಂದ ರಾಜ್ಯದ ಇತರೆ ಸ್ಥಳಗಳಿಗೆ ಹೆಚ್ಚುವರಿಯಾಗಿ ಕಾರ್ಯಚರಣೆ ಮಾಡಲು ಕೆಎಸ್ಆರ್ಟಿಸಿ ಮುಂದಾಗಿದೆ.</p>.<p>ಸೋಮವಾರ ಬೆಳಿಗ್ಗೆ 10 ಗಂಟೆಯವರೆಗೆ 249 ಬಸ್ಸುಗಳನ್ನು ಬೆಂಗಳೂರಿನಿಂದ ಕಾರ್ಯಚರಣೆಗೊಳಿಸಿದ್ದು, 6641 ಪ್ರಯಾಣಿಕರು ಈಗಾಗಲೇ ಪ್ರಯಾಣಿಸಿದ್ದಾರೆ.</p>.<p>231 ಬಸ್ಸುಗಳು ಮುಂಗಡ ಬುಕ್ಕಿಂಗ್ ಆಗಿವೆ. ಸಾಮಾಜಿಕ ಅಂತರ ಕಾಪಾಡಿ, ಪ್ರತಿಯೊಬ್ಬ ಪ್ರಯಾಣಿಕರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಕೆಎಸ್ಆರ್ಟಿಸಿ ಪತ್ರಿಕಾ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>