ಪೌರಾಡಳಿತ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿದ ಸಚಿವರು, ‘ನಗರೋತ್ಥಾನ ಯೋಜನೆ, 14 ಮತ್ತು 15ನೇ ಹಣಕಾಸು ಆಯೋಗ, ಅಮೃತ, ಘನತ್ಯಾಜ್ಯ ವಿಲೇವಾರಿ, ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಗಳಲ್ಲಿ ಅನುದಾನದ ಹಣ ಉಳಿದಿದೆ. ಈ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು’ ಎಂದು ಸೂಚನೆ ನೀಡಿದರು.