‘ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ, ದಾಖಲೆಯ, ಸಂಗತಿಯ ಐತಿಹ್ಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತದೆಯೇ ವಿನಾ ಕೆಡವುವ ಕೆಲಸ ಮಾಡುವುದಿಲ್ಲ. ಇದು ಅನಾವಶ್ಯಕ ರಾಜಕೀಯ ಗೊಂದಲಗಳಿಗೆ ಅವಕಾಶ ಕಲ್ಪಿಸಬೇಕಿಲ್ಲ’ ಎಂದೂ ಸುರೇಶ್ಕುಮಾರ್ ಸ್ಪಷ್ಟಪಡಿಸಿದ್ದಾರೆ.